11:41 AM Monday6 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ಬೆಳಗಾವಿ ಸುವರ್ಣಸೌಧಕ್ಕೆ ಬೆಳಕಿನ ಖದರ್: ವೀಕೆಂಡ್ ನಲ್ಲಿ ಬಣ್ಣದ ಬೆಳಕಿನಲ್ಲಿ ಬೆಳಗುವ ಯೋಜನೆಗೆ ಸ್ಪೀಕರ್ ಖಾದರ್ ಚಾಲನೆ

02/12/2023, 10:03

ಬೆಳಗಾವಿ(reporterkarnataka.com): ದಶಮಾನೋತ್ಸವ ಪೂರೈಸಿರುವ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ ಚಳಿಗಾಲದ ಅಧಿವೇಶನ ಆರಂಭಗೊಳ್ಳಲಿದೆ. ವಿಧಾನ ಸಭಾಧ್ಯಕ್ಷರಾದ ಯು.ಟಿ.ಖಾದರ್ ಸುವರ್ಣ ವಿಧಾನಸೌಧಕ್ಕೆ ಹೊಸ ಖದರ್ ತರಲು ವಿನೂತನ ಯೋಜನೆಗಳನ್ನು ಕಾರ್ಯಗತಗೊಳಿಸುತ್ತಿದ್ದಾರೆ. ಸುವರ್ಣ ಸೌಧ ಕೇವಲ ವರ್ಷದ ಅಧಿವೇಶನಕ್ಕೆ ಸೀಮಿತಗೊಳಿಸದೇ ಅದೊಂದು ಗಡಿ ಪ್ರದೇಶದ ಪ್ರವಾಸಿ ತಾಣವಾಗಿ ಮಾರ್ಪಾಡಾಗಲು ಚಿಂತನೆ ನಡೆಯುತ್ತಿದೆ.


ಈ ಹಿಂದೆ ವರ್ಷದಲ್ಲೊಮ್ಮೆ ಅಧಿವೇಶನ ಸಂದರ್ಭ ಹತ್ತದಿನೈದು ದಿವಸ ಮಾತ್ರ ರಾತ್ರಿಯ ಬೆಳಕಿನ ವ್ಯವಸ್ಥೆ ಮಾಡಲಾಗುತ್ತಿತ್ತು. ಆದರೆ ಸ್ಪೀಕರ್ ಖಾದರ್ ಅವರು ಅದರಲ್ಲಿ ಮಹತ್ತರ ಬದಲಾವಣೆಗೆ ಅಂಕಿತ ಹಾಕಿದ್ದಾರೆ. ಅಧಿವೇಶನ ನಡೆಯುವ ದಿನಗಳಲ್ಲದೇ ಪ್ರತಿ ಶನಿವಾರ ಮತ್ತು ಭಾನುವಾರ ಹಾಗೂ ರಾಷ್ಟ್ರೀಯ ದಿನಾಚರಣೆಗಳಂದು ಬಣ್ಣಬಣ್ಣದ ವಿನ್ಯಾಸದ ಬೆಳಕಿನೊಂದಿಗೆ ಸುವರ್ಣ ಸೌಧ ಕಂಗೊಳಿಸಲು ರೂಪುರೇಷೆಯನ್ನು ತಯಾರಿಸಿದ್ದಾರೆ. ರಾಷ್ಟ್ರದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಬೆಳಕಿನ ವ್ಯವಸ್ಥೆ ಮಾಡುತ್ತಿರುವ ಗುತ್ತಿಗೆದಾರರಿಗೆ 10 ವರ್ಷದ ಸುವರ್ಣಸೌಧದ ಬೆಳಕಿನ ನಿರ್ವಹಣೆ ಕೊಟ್ಟಿರುವ ಸ್ಪೀಕರ್ ಡಿಸೆಂಬರ್ 4 ಅಥವಾ 5 ರಂದು ಅದನ್ನು ಉದ್ಘಾಟಿಸುವರು.
RGBW ಎಲ್ಇಡಿ ಡೈನಾಮಿಕ್ ಲೈಟ್ ನೊಂದಿಗೆ ಮುಂದೆ ಸುವರ್ಣ ಸೌಧ ಕಂಗೊಳಿಸಲಿದೆ. ಬಗೆಬಗೆಯ ವಿನ್ಯಾಸ, ಹಲವು ಬಣ್ಣಗಳಲ್ಲಿ ಕಂಪ್ಯೂಟರೀಕೃತ ಸೌಲಭ್ಯದೊಂದಿಗೆ ಸೌಧದ ಅಂದ ನೂರ್ಮಡಿಗೊಳಿಸಲಿದೆ. ವಿಶೇಷ ಅಂದರೆ ಈ ಹಿಂದೆ ಹತ್ತದಿನೈದು ದಿನ ಉರಿದ ಬೆಳಕಿನ ಅದೇ ಖರ್ಚು ವೆಚ್ಚದಲ್ಲಿ ಈ ಡಿಜಿಟಲೈಸ್ಡ್ ಲೈಟ್ಸ್ ಕೂಡಾ ವರ್ಷಪೂರ್ತಿ ಬೆಳಗಲಿದೆ. ಹೀಗೇ 10 ವರ್ಷದ ಕರಾರನ್ನು ಈ ಯೋಜನೆಗೆ ನೀಡಲಾಗಿದೆ. ಸ್ಪೀಕರ್ ಯು.ಟಿ. ಖಾದರ್ ಅವರ ವಿನೂತನ ದೂರದೃಷ್ಟಿಯ ಯೋಜನೆಗೆ ಎಲ್ಲರೂ ಶಹಬ್ಬಾಸ್ ಗಿರಿ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು