1:07 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಬೆಳಗಾವಿ ಅಧಿವೇಶನ: ಜಲಜೀವನ ಮಿಷನ್ ಅನುಷ್ಠಾನ ಕುರಿತು ಸರಕಾರದ ಗಮನ ಸೆಳೆದ ಶಾಸಕ ಮಂಜುನಾಥ ಭಂಡಾರಿ

09/12/2024, 23:55

ಬೆಳಗಾವಿ(reporterkarnataka.com): ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ಕಾಮಗಾರಿಗಳು ಅನುಷ್ಠಾನಗೊಳ್ಳದ ಕುರಿತು ಸರಕಾರದ ಗಮನನ್ನು ಸೆಳೆದರು.
ಜಲಜೀವನ ಮಿಷನ್ ಯೋಜನೆಯಲ್ಲಿ ನೀರಿನ ಮೂಲಗಳು ಅನುಷ್ಠಾನವಾಗದ ಕುರಿತು ಪ್ರಸ್ತಾಪಿಸಿ ಶೀಘ್ರವಾಗಿ ಯೋಜನೆಗೆ ಸಂಬಂಧಿಸಿದ ನೀರಿನ ಮೂಲಗಳನ್ನು ಪ್ರಥಮವಾಗಿ ಶೋಧಿಸಿ ಅಳವಡಿಸುವ ಮೂಲಕ ಸಮರ್ಪಕ ಅನುಷ್ಠಾನಕ್ಕಾಗಿ ಶೂನ್ಯ ವೇಳೆಯಲ್ಲಿ ಸರಕಾರವನ್ನು ಒತ್ತಾಯಿಸಿದರು.
ಮಳೆಗಾಲ ಮುಗಿದು ಚಳಿ ಕಾಲಿರಿಸಿದ್ದರೂ ಕರಾವಳಿಯಲ್ಲಿ ಜಲಜೀವನ ಮಿಷನ್ ಕಾಮಗಾರಿ ಪುನರಾರಂಭವಾಗಿಲ್ಲ. ಮಳೆಗಾಲಕ್ಕೆ ಪೂರ್ವದಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ವಿವಿಧೆಡೆ ಕಾಮಗಾರಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು ಮರಳಿ ಚಾಲನೆ ಸಿಕ್ಕಿಲ್ಲ. ಒಟ್ಟಿನಲ್ಲಿ ಜಲಜೀವನ್ ಮಿಷನ್‌ ಗೆ ಜೀವ ಇಲ್ಲದಂತಾಗಿದೆ. ಮನೆ ಮನೆಗೆ ಶುದ್ಧ ಕುಡಿಯುವ ನೀರನ್ನು ಪೂರೈಸುವ ಕೇಂದ್ರ ಸರಕಾರದ ಯೋಜನೆ ಇದಾಗಿದೆ. ಹಲವು ಗ್ರಾಮ ಪಂಚಾಯತ್ ವ್ಯಾಪ್ತಿಯ ಮನೆಗಳ ಆವರಣದಲ್ಲಿ ನಲ್ಲಿ ನೀರು ಹಿಡಿಯಲು ಬೇಕಾದ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ನಲ್ಲಿ ಮೂಲಕ ನೀರು ಪೂರೈಸುವ ಪ್ರಕ್ರಿಯೆ ಆರಂಭವಾಗಿಲ್ಲ. ದಾಖಲೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ 2,94,409 2,05,807 ಮನೆಗಳಿಗೆ ನೀರಿನ ಸಂಪರ್ಕ ನೀಡಲಾಗಿದೆ. ಗ್ರಾಮೀಣ ಭಾಗದಲ್ಲಿ ಜಲಜೀವನ್ ಮಿಷನ್ ಕಾಮಗಾರಿಗಾಗಿ ಅಲ್ಲಲ್ಲಿ ಪೈಪ್ ಲೈನ್ ಅಗೆದು ‎ಮಣ್ಣು ತುಂಬಿದ್ದಾರೆ. ಇನ್ನು ಕೆಲವು ಕಡೆ ಪೈಪ್‌ಲೈನ್ ಪೂರ್ತಿಯಾಗಿ ಅಳವಡಿಸಿಲ್ಲ. ಹೀಗಾಗಿ ಸಾರ್ವಜನಿಕರಿಗೆ ಅಡಚಣೆ ಉಂಟಾಗಿದೆ.
ಆದ್ದರಿಂದ ಈ ಯೋಜನೆಗೆ ಸಂಬಂಧಿಸಿದಂತೆ ನೀರಿನ ಮೂಲವನ್ನು ಮೊದಲು ಶೋಧಿಸಿ ಅನುಷ್ಠಾನ ಮಾಡುವ ಜೊತೆಗೆ ಆದಷ್ಟು ಬೇಗ ಕಾಮಗಾರಿಯನ್ನು ಪುನರಾರಂಭಿಸಲು ಕ್ರಮಕೈಗೊಳ್ಳುವಂತೆ ಮಂಜುನಾಥ ಭಂಡಾರಿ ಅವರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು