2:06 PM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಅವಕಾಶ ಬೇಡ: ಕರವೇ

25/10/2024, 18:40

ಬೆಳಗಾವಿ(reporterkarnataka.com): ರಾಜ್ಯೋತ್ಸವದ ದಿನದಂದು ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮೀತಿಗೆ ಕರಾಳ ದಿನಾಚರಣೆ ಆಚರಿಸಲು ಅವಕಾಶ ಕೊಡಬಾರದೆಂದು ಕರವೇ ಮನವಿ ಮಾಡಿದೆ.
ರಾಜ್ಯೋತ್ಸವದ ದಿನ ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಕನ್ನಡದ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ, ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಾಚರಣೆ ಆಚರಿಸುತ್ತಿದೆ. ಕನ್ನಡದ ನೆಲದಲ್ಲಿ ಕನ್ನಡಿಗರಿಗೆ ದ್ರೋಹ ಬಗೆಯುವ ಕರಾಳ ದಿನಾಚರಣೆಗೆ ಈ ವರ್ಷ ಯಾವುದೇ ಕಾರಣಕ್ಕೂ ಬೆಳಗಾವಿ ನಗರದಲ್ಲಿ ಅವಕಾಶ ನೀಡಬಾರದು. ಅನುಮತಿ ನೀಡುವದಿಲ್ಲ ಎಂದು ಸುಳ್ಳು ಹೇಳಿ ಪೋಲೀಸ್ ಇಲಾಖೆಯು ಮದ್ಯರಾತ್ರಿ ಅನುಮತಿ ನೀಡುವ ಮೂಲಕ ಕನ್ನಡಿಗರಿಗೆ ಅನ್ಯಾಯ ಮಾಡುತ್ತಾ ಬಂದಿದ್ದಾರೆ, ಅದೇ ರೀತಿ ಈ ಬಾರಿ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಈ ಕುರಿತು ನಾವು ಸರಕಾರಕ್ಕೆ ಉಪವಿಭಾಗಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಸಂಜು ಬಡಿಗೇರ ಮಾತನಾಡಿ, ಕನ್ನಡಿಗರ ಮನವಿಯನ್ನು ದಿಕ್ಕರಿಸಿದರೆ ಸರ್ಕಾರದ ವಿರುದ್ಧ ಮತ್ತು ಪೋಲೀಸ್ ಇಲಾಖೆಯ ಕನ್ನಡ ವಿರೋಧಿ ಧೋರಣೆಯ ವಿರುದ್ದ ಕರವೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತದೆ ಎಂದು ಹೇಳಿದರು.
ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ರಾಜ್ತೋತ್ಸವದ ದಿನದಂದು ಕರಾಳ ದಿನಾಚರಣೆ ಮಾಡುತ್ತೇವೆ ಎಂದು ತಮ್ಮ ಬಳಿ ಬರುವ ಎಂಈಎಸ್ ನಾಯಕರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಅವರನ್ನು ಮುಂಜಾಗ್ರತವಾಗಿ ಬಂಧಿಸುವ ಮೂಲಕ ಕನ್ನಡದ ನೆಲದಲ್ಲಿ ಕನ್ನಡದ ಹಿತ ಕಾಯಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ರಮೇಶ ಡಂಗೇರ, ಸಂತೋಷ ಪೂಜೇರಿ, ದುಂಡಪ್ಪಾ ಬಡಿಗೇರ, ಅಮೂಲ ನಾವಿ, ರುದ್ರಯ್ಯಾ ಹಿರೇಮಠ, ಕುಮಾರ ಪಾಟೀಲ, ಸೌರಭ ಹಿರೇಮಠ, ಮಂಜುನಾಥ ಬಾನಸೆ, ಚನ್ನಪ್ಪಾ ಬಡಿಗೇರ ಹಾಗೂ ಇತರ ಕನ್ನಡ ಪರ ಹೋರಾಟಗಾರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು