5:26 PM Tuesday19 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಅವಕಾಶ ಬೇಡ: ಕರವೇ

25/10/2024, 18:40

ಬೆಳಗಾವಿ(reporterkarnataka.com): ರಾಜ್ಯೋತ್ಸವದ ದಿನದಂದು ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮೀತಿಗೆ ಕರಾಳ ದಿನಾಚರಣೆ ಆಚರಿಸಲು ಅವಕಾಶ ಕೊಡಬಾರದೆಂದು ಕರವೇ ಮನವಿ ಮಾಡಿದೆ.
ರಾಜ್ಯೋತ್ಸವದ ದಿನ ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಕನ್ನಡದ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ, ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಾಚರಣೆ ಆಚರಿಸುತ್ತಿದೆ. ಕನ್ನಡದ ನೆಲದಲ್ಲಿ ಕನ್ನಡಿಗರಿಗೆ ದ್ರೋಹ ಬಗೆಯುವ ಕರಾಳ ದಿನಾಚರಣೆಗೆ ಈ ವರ್ಷ ಯಾವುದೇ ಕಾರಣಕ್ಕೂ ಬೆಳಗಾವಿ ನಗರದಲ್ಲಿ ಅವಕಾಶ ನೀಡಬಾರದು. ಅನುಮತಿ ನೀಡುವದಿಲ್ಲ ಎಂದು ಸುಳ್ಳು ಹೇಳಿ ಪೋಲೀಸ್ ಇಲಾಖೆಯು ಮದ್ಯರಾತ್ರಿ ಅನುಮತಿ ನೀಡುವ ಮೂಲಕ ಕನ್ನಡಿಗರಿಗೆ ಅನ್ಯಾಯ ಮಾಡುತ್ತಾ ಬಂದಿದ್ದಾರೆ, ಅದೇ ರೀತಿ ಈ ಬಾರಿ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಈ ಕುರಿತು ನಾವು ಸರಕಾರಕ್ಕೆ ಉಪವಿಭಾಗಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಸಂಜು ಬಡಿಗೇರ ಮಾತನಾಡಿ, ಕನ್ನಡಿಗರ ಮನವಿಯನ್ನು ದಿಕ್ಕರಿಸಿದರೆ ಸರ್ಕಾರದ ವಿರುದ್ಧ ಮತ್ತು ಪೋಲೀಸ್ ಇಲಾಖೆಯ ಕನ್ನಡ ವಿರೋಧಿ ಧೋರಣೆಯ ವಿರುದ್ದ ಕರವೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತದೆ ಎಂದು ಹೇಳಿದರು.
ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ರಾಜ್ತೋತ್ಸವದ ದಿನದಂದು ಕರಾಳ ದಿನಾಚರಣೆ ಮಾಡುತ್ತೇವೆ ಎಂದು ತಮ್ಮ ಬಳಿ ಬರುವ ಎಂಈಎಸ್ ನಾಯಕರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಅವರನ್ನು ಮುಂಜಾಗ್ರತವಾಗಿ ಬಂಧಿಸುವ ಮೂಲಕ ಕನ್ನಡದ ನೆಲದಲ್ಲಿ ಕನ್ನಡದ ಹಿತ ಕಾಯಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ರಮೇಶ ಡಂಗೇರ, ಸಂತೋಷ ಪೂಜೇರಿ, ದುಂಡಪ್ಪಾ ಬಡಿಗೇರ, ಅಮೂಲ ನಾವಿ, ರುದ್ರಯ್ಯಾ ಹಿರೇಮಠ, ಕುಮಾರ ಪಾಟೀಲ, ಸೌರಭ ಹಿರೇಮಠ, ಮಂಜುನಾಥ ಬಾನಸೆ, ಚನ್ನಪ್ಪಾ ಬಡಿಗೇರ ಹಾಗೂ ಇತರ ಕನ್ನಡ ಪರ ಹೋರಾಟಗಾರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು