5:19 AM Saturday4 - April 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಅವಕಾಶ ಬೇಡ: ಕರವೇ

25/10/2024, 18:40

ಬೆಳಗಾವಿ(reporterkarnataka.com): ರಾಜ್ಯೋತ್ಸವದ ದಿನದಂದು ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮೀತಿಗೆ ಕರಾಳ ದಿನಾಚರಣೆ ಆಚರಿಸಲು ಅವಕಾಶ ಕೊಡಬಾರದೆಂದು ಕರವೇ ಮನವಿ ಮಾಡಿದೆ.
ರಾಜ್ಯೋತ್ಸವದ ದಿನ ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಕನ್ನಡದ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ, ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಾಚರಣೆ ಆಚರಿಸುತ್ತಿದೆ. ಕನ್ನಡದ ನೆಲದಲ್ಲಿ ಕನ್ನಡಿಗರಿಗೆ ದ್ರೋಹ ಬಗೆಯುವ ಕರಾಳ ದಿನಾಚರಣೆಗೆ ಈ ವರ್ಷ ಯಾವುದೇ ಕಾರಣಕ್ಕೂ ಬೆಳಗಾವಿ ನಗರದಲ್ಲಿ ಅವಕಾಶ ನೀಡಬಾರದು. ಅನುಮತಿ ನೀಡುವದಿಲ್ಲ ಎಂದು ಸುಳ್ಳು ಹೇಳಿ ಪೋಲೀಸ್ ಇಲಾಖೆಯು ಮದ್ಯರಾತ್ರಿ ಅನುಮತಿ ನೀಡುವ ಮೂಲಕ ಕನ್ನಡಿಗರಿಗೆ ಅನ್ಯಾಯ ಮಾಡುತ್ತಾ ಬಂದಿದ್ದಾರೆ, ಅದೇ ರೀತಿ ಈ ಬಾರಿ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಈ ಕುರಿತು ನಾವು ಸರಕಾರಕ್ಕೆ ಉಪವಿಭಾಗಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಸಂಜು ಬಡಿಗೇರ ಮಾತನಾಡಿ, ಕನ್ನಡಿಗರ ಮನವಿಯನ್ನು ದಿಕ್ಕರಿಸಿದರೆ ಸರ್ಕಾರದ ವಿರುದ್ಧ ಮತ್ತು ಪೋಲೀಸ್ ಇಲಾಖೆಯ ಕನ್ನಡ ವಿರೋಧಿ ಧೋರಣೆಯ ವಿರುದ್ದ ಕರವೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತದೆ ಎಂದು ಹೇಳಿದರು.
ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ರಾಜ್ತೋತ್ಸವದ ದಿನದಂದು ಕರಾಳ ದಿನಾಚರಣೆ ಮಾಡುತ್ತೇವೆ ಎಂದು ತಮ್ಮ ಬಳಿ ಬರುವ ಎಂಈಎಸ್ ನಾಯಕರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಅವರನ್ನು ಮುಂಜಾಗ್ರತವಾಗಿ ಬಂಧಿಸುವ ಮೂಲಕ ಕನ್ನಡದ ನೆಲದಲ್ಲಿ ಕನ್ನಡದ ಹಿತ ಕಾಯಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ರಮೇಶ ಡಂಗೇರ, ಸಂತೋಷ ಪೂಜೇರಿ, ದುಂಡಪ್ಪಾ ಬಡಿಗೇರ, ಅಮೂಲ ನಾವಿ, ರುದ್ರಯ್ಯಾ ಹಿರೇಮಠ, ಕುಮಾರ ಪಾಟೀಲ, ಸೌರಭ ಹಿರೇಮಠ, ಮಂಜುನಾಥ ಬಾನಸೆ, ಚನ್ನಪ್ಪಾ ಬಡಿಗೇರ ಹಾಗೂ ಇತರ ಕನ್ನಡ ಪರ ಹೋರಾಟಗಾರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು