9:52 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಅವಕಾಶ ಬೇಡ: ಕರವೇ

25/10/2024, 18:40

ಬೆಳಗಾವಿ(reporterkarnataka.com): ರಾಜ್ಯೋತ್ಸವದ ದಿನದಂದು ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮೀತಿಗೆ ಕರಾಳ ದಿನಾಚರಣೆ ಆಚರಿಸಲು ಅವಕಾಶ ಕೊಡಬಾರದೆಂದು ಕರವೇ ಮನವಿ ಮಾಡಿದೆ.
ರಾಜ್ಯೋತ್ಸವದ ದಿನ ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಕನ್ನಡದ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ, ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಾಚರಣೆ ಆಚರಿಸುತ್ತಿದೆ. ಕನ್ನಡದ ನೆಲದಲ್ಲಿ ಕನ್ನಡಿಗರಿಗೆ ದ್ರೋಹ ಬಗೆಯುವ ಕರಾಳ ದಿನಾಚರಣೆಗೆ ಈ ವರ್ಷ ಯಾವುದೇ ಕಾರಣಕ್ಕೂ ಬೆಳಗಾವಿ ನಗರದಲ್ಲಿ ಅವಕಾಶ ನೀಡಬಾರದು. ಅನುಮತಿ ನೀಡುವದಿಲ್ಲ ಎಂದು ಸುಳ್ಳು ಹೇಳಿ ಪೋಲೀಸ್ ಇಲಾಖೆಯು ಮದ್ಯರಾತ್ರಿ ಅನುಮತಿ ನೀಡುವ ಮೂಲಕ ಕನ್ನಡಿಗರಿಗೆ ಅನ್ಯಾಯ ಮಾಡುತ್ತಾ ಬಂದಿದ್ದಾರೆ, ಅದೇ ರೀತಿ ಈ ಬಾರಿ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಈ ಕುರಿತು ನಾವು ಸರಕಾರಕ್ಕೆ ಉಪವಿಭಾಗಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಸಂಜು ಬಡಿಗೇರ ಮಾತನಾಡಿ, ಕನ್ನಡಿಗರ ಮನವಿಯನ್ನು ದಿಕ್ಕರಿಸಿದರೆ ಸರ್ಕಾರದ ವಿರುದ್ಧ ಮತ್ತು ಪೋಲೀಸ್ ಇಲಾಖೆಯ ಕನ್ನಡ ವಿರೋಧಿ ಧೋರಣೆಯ ವಿರುದ್ದ ಕರವೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತದೆ ಎಂದು ಹೇಳಿದರು.
ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ರಾಜ್ತೋತ್ಸವದ ದಿನದಂದು ಕರಾಳ ದಿನಾಚರಣೆ ಮಾಡುತ್ತೇವೆ ಎಂದು ತಮ್ಮ ಬಳಿ ಬರುವ ಎಂಈಎಸ್ ನಾಯಕರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಅವರನ್ನು ಮುಂಜಾಗ್ರತವಾಗಿ ಬಂಧಿಸುವ ಮೂಲಕ ಕನ್ನಡದ ನೆಲದಲ್ಲಿ ಕನ್ನಡದ ಹಿತ ಕಾಯಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ರಮೇಶ ಡಂಗೇರ, ಸಂತೋಷ ಪೂಜೇರಿ, ದುಂಡಪ್ಪಾ ಬಡಿಗೇರ, ಅಮೂಲ ನಾವಿ, ರುದ್ರಯ್ಯಾ ಹಿರೇಮಠ, ಕುಮಾರ ಪಾಟೀಲ, ಸೌರಭ ಹಿರೇಮಠ, ಮಂಜುನಾಥ ಬಾನಸೆ, ಚನ್ನಪ್ಪಾ ಬಡಿಗೇರ ಹಾಗೂ ಇತರ ಕನ್ನಡ ಪರ ಹೋರಾಟಗಾರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು