10:56 PM Monday30 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಅವಕಾಶ ಬೇಡ: ಕರವೇ

25/10/2024, 18:40

ಬೆಳಗಾವಿ(reporterkarnataka.com): ರಾಜ್ಯೋತ್ಸವದ ದಿನದಂದು ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮೀತಿಗೆ ಕರಾಳ ದಿನಾಚರಣೆ ಆಚರಿಸಲು ಅವಕಾಶ ಕೊಡಬಾರದೆಂದು ಕರವೇ ಮನವಿ ಮಾಡಿದೆ.
ರಾಜ್ಯೋತ್ಸವದ ದಿನ ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಕನ್ನಡದ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ, ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಾಚರಣೆ ಆಚರಿಸುತ್ತಿದೆ. ಕನ್ನಡದ ನೆಲದಲ್ಲಿ ಕನ್ನಡಿಗರಿಗೆ ದ್ರೋಹ ಬಗೆಯುವ ಕರಾಳ ದಿನಾಚರಣೆಗೆ ಈ ವರ್ಷ ಯಾವುದೇ ಕಾರಣಕ್ಕೂ ಬೆಳಗಾವಿ ನಗರದಲ್ಲಿ ಅವಕಾಶ ನೀಡಬಾರದು. ಅನುಮತಿ ನೀಡುವದಿಲ್ಲ ಎಂದು ಸುಳ್ಳು ಹೇಳಿ ಪೋಲೀಸ್ ಇಲಾಖೆಯು ಮದ್ಯರಾತ್ರಿ ಅನುಮತಿ ನೀಡುವ ಮೂಲಕ ಕನ್ನಡಿಗರಿಗೆ ಅನ್ಯಾಯ ಮಾಡುತ್ತಾ ಬಂದಿದ್ದಾರೆ, ಅದೇ ರೀತಿ ಈ ಬಾರಿ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಈ ಕುರಿತು ನಾವು ಸರಕಾರಕ್ಕೆ ಉಪವಿಭಾಗಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಸಂಜು ಬಡಿಗೇರ ಮಾತನಾಡಿ, ಕನ್ನಡಿಗರ ಮನವಿಯನ್ನು ದಿಕ್ಕರಿಸಿದರೆ ಸರ್ಕಾರದ ವಿರುದ್ಧ ಮತ್ತು ಪೋಲೀಸ್ ಇಲಾಖೆಯ ಕನ್ನಡ ವಿರೋಧಿ ಧೋರಣೆಯ ವಿರುದ್ದ ಕರವೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತದೆ ಎಂದು ಹೇಳಿದರು.
ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ರಾಜ್ತೋತ್ಸವದ ದಿನದಂದು ಕರಾಳ ದಿನಾಚರಣೆ ಮಾಡುತ್ತೇವೆ ಎಂದು ತಮ್ಮ ಬಳಿ ಬರುವ ಎಂಈಎಸ್ ನಾಯಕರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಅವರನ್ನು ಮುಂಜಾಗ್ರತವಾಗಿ ಬಂಧಿಸುವ ಮೂಲಕ ಕನ್ನಡದ ನೆಲದಲ್ಲಿ ಕನ್ನಡದ ಹಿತ ಕಾಯಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ರಮೇಶ ಡಂಗೇರ, ಸಂತೋಷ ಪೂಜೇರಿ, ದುಂಡಪ್ಪಾ ಬಡಿಗೇರ, ಅಮೂಲ ನಾವಿ, ರುದ್ರಯ್ಯಾ ಹಿರೇಮಠ, ಕುಮಾರ ಪಾಟೀಲ, ಸೌರಭ ಹಿರೇಮಠ, ಮಂಜುನಾಥ ಬಾನಸೆ, ಚನ್ನಪ್ಪಾ ಬಡಿಗೇರ ಹಾಗೂ ಇತರ ಕನ್ನಡ ಪರ ಹೋರಾಟಗಾರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು