9:28 AM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಅವಕಾಶ ಬೇಡ: ಕರವೇ

25/10/2024, 18:40

ಬೆಳಗಾವಿ(reporterkarnataka.com): ರಾಜ್ಯೋತ್ಸವದ ದಿನದಂದು ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮೀತಿಗೆ ಕರಾಳ ದಿನಾಚರಣೆ ಆಚರಿಸಲು ಅವಕಾಶ ಕೊಡಬಾರದೆಂದು ಕರವೇ ಮನವಿ ಮಾಡಿದೆ.
ರಾಜ್ಯೋತ್ಸವದ ದಿನ ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಕನ್ನಡದ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ, ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಾಚರಣೆ ಆಚರಿಸುತ್ತಿದೆ. ಕನ್ನಡದ ನೆಲದಲ್ಲಿ ಕನ್ನಡಿಗರಿಗೆ ದ್ರೋಹ ಬಗೆಯುವ ಕರಾಳ ದಿನಾಚರಣೆಗೆ ಈ ವರ್ಷ ಯಾವುದೇ ಕಾರಣಕ್ಕೂ ಬೆಳಗಾವಿ ನಗರದಲ್ಲಿ ಅವಕಾಶ ನೀಡಬಾರದು. ಅನುಮತಿ ನೀಡುವದಿಲ್ಲ ಎಂದು ಸುಳ್ಳು ಹೇಳಿ ಪೋಲೀಸ್ ಇಲಾಖೆಯು ಮದ್ಯರಾತ್ರಿ ಅನುಮತಿ ನೀಡುವ ಮೂಲಕ ಕನ್ನಡಿಗರಿಗೆ ಅನ್ಯಾಯ ಮಾಡುತ್ತಾ ಬಂದಿದ್ದಾರೆ, ಅದೇ ರೀತಿ ಈ ಬಾರಿ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಈ ಕುರಿತು ನಾವು ಸರಕಾರಕ್ಕೆ ಉಪವಿಭಾಗಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಸಂಜು ಬಡಿಗೇರ ಮಾತನಾಡಿ, ಕನ್ನಡಿಗರ ಮನವಿಯನ್ನು ದಿಕ್ಕರಿಸಿದರೆ ಸರ್ಕಾರದ ವಿರುದ್ಧ ಮತ್ತು ಪೋಲೀಸ್ ಇಲಾಖೆಯ ಕನ್ನಡ ವಿರೋಧಿ ಧೋರಣೆಯ ವಿರುದ್ದ ಕರವೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತದೆ ಎಂದು ಹೇಳಿದರು.
ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ರಾಜ್ತೋತ್ಸವದ ದಿನದಂದು ಕರಾಳ ದಿನಾಚರಣೆ ಮಾಡುತ್ತೇವೆ ಎಂದು ತಮ್ಮ ಬಳಿ ಬರುವ ಎಂಈಎಸ್ ನಾಯಕರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಅವರನ್ನು ಮುಂಜಾಗ್ರತವಾಗಿ ಬಂಧಿಸುವ ಮೂಲಕ ಕನ್ನಡದ ನೆಲದಲ್ಲಿ ಕನ್ನಡದ ಹಿತ ಕಾಯಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ರಮೇಶ ಡಂಗೇರ, ಸಂತೋಷ ಪೂಜೇರಿ, ದುಂಡಪ್ಪಾ ಬಡಿಗೇರ, ಅಮೂಲ ನಾವಿ, ರುದ್ರಯ್ಯಾ ಹಿರೇಮಠ, ಕುಮಾರ ಪಾಟೀಲ, ಸೌರಭ ಹಿರೇಮಠ, ಮಂಜುನಾಥ ಬಾನಸೆ, ಚನ್ನಪ್ಪಾ ಬಡಿಗೇರ ಹಾಗೂ ಇತರ ಕನ್ನಡ ಪರ ಹೋರಾಟಗಾರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು