3:54 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಅವಕಾಶ ಬೇಡ: ಕರವೇ

25/10/2024, 18:40

ಬೆಳಗಾವಿ(reporterkarnataka.com): ರಾಜ್ಯೋತ್ಸವದ ದಿನದಂದು ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮೀತಿಗೆ ಕರಾಳ ದಿನಾಚರಣೆ ಆಚರಿಸಲು ಅವಕಾಶ ಕೊಡಬಾರದೆಂದು ಕರವೇ ಮನವಿ ಮಾಡಿದೆ.
ರಾಜ್ಯೋತ್ಸವದ ದಿನ ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಕನ್ನಡದ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ, ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಾಚರಣೆ ಆಚರಿಸುತ್ತಿದೆ. ಕನ್ನಡದ ನೆಲದಲ್ಲಿ ಕನ್ನಡಿಗರಿಗೆ ದ್ರೋಹ ಬಗೆಯುವ ಕರಾಳ ದಿನಾಚರಣೆಗೆ ಈ ವರ್ಷ ಯಾವುದೇ ಕಾರಣಕ್ಕೂ ಬೆಳಗಾವಿ ನಗರದಲ್ಲಿ ಅವಕಾಶ ನೀಡಬಾರದು. ಅನುಮತಿ ನೀಡುವದಿಲ್ಲ ಎಂದು ಸುಳ್ಳು ಹೇಳಿ ಪೋಲೀಸ್ ಇಲಾಖೆಯು ಮದ್ಯರಾತ್ರಿ ಅನುಮತಿ ನೀಡುವ ಮೂಲಕ ಕನ್ನಡಿಗರಿಗೆ ಅನ್ಯಾಯ ಮಾಡುತ್ತಾ ಬಂದಿದ್ದಾರೆ, ಅದೇ ರೀತಿ ಈ ಬಾರಿ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಈ ಕುರಿತು ನಾವು ಸರಕಾರಕ್ಕೆ ಉಪವಿಭಾಗಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷ ಸಂಜು ಬಡಿಗೇರ ಮಾತನಾಡಿ, ಕನ್ನಡಿಗರ ಮನವಿಯನ್ನು ದಿಕ್ಕರಿಸಿದರೆ ಸರ್ಕಾರದ ವಿರುದ್ಧ ಮತ್ತು ಪೋಲೀಸ್ ಇಲಾಖೆಯ ಕನ್ನಡ ವಿರೋಧಿ ಧೋರಣೆಯ ವಿರುದ್ದ ಕರವೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತದೆ ಎಂದು ಹೇಳಿದರು.
ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ರಾಜ್ತೋತ್ಸವದ ದಿನದಂದು ಕರಾಳ ದಿನಾಚರಣೆ ಮಾಡುತ್ತೇವೆ ಎಂದು ತಮ್ಮ ಬಳಿ ಬರುವ ಎಂಈಎಸ್ ನಾಯಕರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಅವರನ್ನು ಮುಂಜಾಗ್ರತವಾಗಿ ಬಂಧಿಸುವ ಮೂಲಕ ಕನ್ನಡದ ನೆಲದಲ್ಲಿ ಕನ್ನಡದ ಹಿತ ಕಾಯಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ರಮೇಶ ಡಂಗೇರ, ಸಂತೋಷ ಪೂಜೇರಿ, ದುಂಡಪ್ಪಾ ಬಡಿಗೇರ, ಅಮೂಲ ನಾವಿ, ರುದ್ರಯ್ಯಾ ಹಿರೇಮಠ, ಕುಮಾರ ಪಾಟೀಲ, ಸೌರಭ ಹಿರೇಮಠ, ಮಂಜುನಾಥ ಬಾನಸೆ, ಚನ್ನಪ್ಪಾ ಬಡಿಗೇರ ಹಾಗೂ ಇತರ ಕನ್ನಡ ಪರ ಹೋರಾಟಗಾರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು