2:19 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಬೆಳ್ಳಂಬೆಳಗೆ ಕಾರ್ಯಾಚರಣೆ: ನಿರ್ಮಿತಿ ಕೇಂದ್ರದ ಅಧಿಕಾರಿಯ ಮನೆ, ಕಚೇರಿ, ಪೆಟ್ರೋಲ್ ಬಂಕ್ ಮೇಲೆ ಲೋಕಾಯುಕ್ತ ದಾಳಿ

28/06/2023, 10:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ಬೆಳ್ಳಂ-ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ಗಂಗಾಧರ್ ಅವರ ಮನೆ, ಕಚೇರಿ, ಪೆಟ್ರೋಲ್ ಬಂಕ್ ಹಾಗೂ ನಿರ್ಮಾಣ ಹಂತದಲ್ಲಿರುವ ರೆಸಾರ್ಟ್‌ ಮೇಲೆ ದಾಳಿ ನಡೆಸಲಾಗಿದೆ.
ಅಕ್ರಮ ಆಸ್ತಿ ಸಂಪಾದನೆಯ ದೂರಿನ ಮೇಲೆ ಗಂಗಾಧರ್ ಅವರ ನಿವಾಸದ ಮೇಲೆ ಬುಧವಾರ ಬೆಳ್ಳಂಬೆಳಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


ಏಕಕಾಲದಲ್ಲಿ ಗಂಗಾಧರ್ ಅವರ ಜಯನಗರ ಬಡಾವಣೆಯಲ್ಲಿರುವ
ಮನೆ,ರಾಮನಹಳ್ಳಿಯಲ್ಲಿರುವ ಪೆಟ್ರೋಲ್ ಬಂಕ್, ನಿರ್ಮಾಣ ಹಂತದ ರೆಸಾರ್ಟ್ ಮೇಲೆ ದಾಳಿ ನಡೆದಿದೆ.
ಗಂಗಾಧರ್ ಅವರು ಕೆಲಸ ನಿರ್ವಹಿಸುತ್ತಿರುವ ನಿರ್ಮಿತಿ ಕೇಂದ್ರದ ಕಚೇರಿ ಮೇಲೂ ದಾಳಿ ನಡೆಸಲಾಗಿದೆ.
ಏಕಕಾಲದಲ್ಲಿ 50ಕ್ಕೂ ಹೆಚ್ಚು ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಡಿವೈಎಸ್ಪಿ ತಿರುಮಲೇಶ್ ನೇತೃತ್ವವ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು