7:35 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ…

ಇತ್ತೀಚಿನ ಸುದ್ದಿ

ಬೆಳ್ಳಾರೆಗೆ ಪ್ರತಿಪಕ್ಷ ಉಪ ನಾಯಕ ಖಾದರ್ ಭೇಟಿ:  ಹತ್ಯೆಗೀಡಾದ ಮಸೂದ್, ಪ್ರವೀಣ್ ಕುಟುಂಬಕ್ಕೆ ಸಾಂತ್ವನ

29/07/2022, 22:02

ಬೆಳ್ಳಾರೆ(reporterkarnataka.com):
ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ  ಹತ್ಯೆಗೀಡಾದ ಮಸೂದ್ ಮನೆಗೆ ಭೇಟಿ
ನೀಡಿದ ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಅವರು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹಾಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ ನೆಟ್ಟಾರು ಅವರ ಪತ್ನಿ ಮತ್ತು ಹೆತ್ತವರಿಗೆ ದೂರವಾಣಿ ಮೂಲಕ ಸಾಂತ್ವನ ತಿಳಿಸಿದರು.

ಬೆಂಗಳೂರಿನಿಂದ ಶುಕ್ರವಾರ ಮುಂಜಾನೆ ಮಂಗಳೂರಿಗೆ ಆಗಮಿಸಿದ ಯು.ಟಿ.ಖಾದರ್  ಅವರು ಕಳೆದ ವಾರ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಹತ್ಯೆಯಾಗಿದ್ದ ಮಸೂದ್  ಅವರ ಮನೆಗೆ ಹಾಗೂ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.


ಈ ಸಂದರ್ಭದಲ್ಲಿ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಇನ್ನೋರ್ವ ಪ್ರವೀಣ ನೆಟ್ಟಾರುರವರ ಮನೆಗೂ ಕೂಡಾ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಭೇಟಿ ನೀಡಬೇಕಿತ್ತಾದರೂ ಅವರ ಪತ್ನಿ ಮತ್ತು ಹೆತ್ತವರು ವಿಶ್ರಾಂತಿಯಲ್ಲಿರುವುದರಿಂದ ನೆಟ್ಟಾರು ಅವರ ಚಿಕ್ಕಪ್ಪ ವಿಶ್ವನಾಥ ಅವರಲ್ಲಿ ದೂರವಾಣಿ ಮೂಲಕ ಸಂಪರ್ಕಿಸಿ ಸಾಂತ್ವನ ತಿಳಿಸಿದರು. ಕಳೆದ ಎರಡು ದಿನಗಳಿಂದ ಸತತ ನಾಯಕರು ಇತರರ ಭೇಟಿಯಿಂದಾಗಿ ಪ್ರವೀಣ ನೆಟ್ಟಾರು ಅವರ ಪತ್ನಿ ಹಾಗೂ ಹೆತ್ತವರು ವಿಶ್ರಾಂತಿಯಲ್ಲಿದ್ದು ತಾವು ಕರೆ ಮಾಡಿ ಸಾಂತ್ವನ ತಿಳಿಸಿದ್ದು ಮನೆಗೆ ಭೇಟಿ ನೀಡಿದ್ದಷ್ಟೆ ತೃಪ್ತಿಯಾಯಿತೆಂದು  ಈ ಸಂದರ್ಭದಲ್ಲಿ ಪ್ರವೀಣ್  ಅವರ ಚಿಕ್ಕಪ್ಪ ವಿಶ್ವನಾಥ ಅವರು ಖಾದರ್ ರವರಿಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು