8:28 PM Wednesday10 - June 2026
ಬ್ರೇಕಿಂಗ್ ನ್ಯೂಸ್
ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ…

ಇತ್ತೀಚಿನ ಸುದ್ದಿ

ಬಳ್ಳಾರಿ | ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ: ಬೆಂಕಿ ಹೊತ್ತಿಕೊಂಡು ಚಾಲಕ ಸಜೀವ ದಹನ

10/06/2026, 20:23

ಬಳ್ಳಾರಿ(reporterkarnataka.com): ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ಲಾರಿ ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾಗಿರುವ ಘಟನೆ ಆಂಧ್ರ- ಕರ್ನಾಟಕ ಗಡಿಯ ಜಾಜರಕಲ್ ಟೋಲ್‌ಗೇಟ್ ಬಳಿ ನಡೆದಿದೆ.
ಬಳ್ಳಾರಿ ಜಿಲ್ಲೆ ಗಡಿಭಾಗ ಆಂಧ್ರದ ಅನಂತಪುರ ಜಿಲ್ಲೆಯ ಡಿ.ಹಿರೇಹಾಳ ಬಳಿ ಘಟನೆ ನಡೆದಿದೆ. ಪಂಕ್ಚರ್ ಆಗಿದ್ದ ಸಿಮೆಂಟ್ ಟ್ಯಾಂಕರ್‌ವೊಂದು ರಸ್ತೆ ಬದಿಯಲ್ಲಿ ನಿಂತಿತ್ತು. ಈ ವೇಳೆ ರಾಂಪುರಂ ಕಡೆಯಿಂದ ಬಂದ ಮತ್ತೊಂದು ಲಾರಿ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಅಪಘಾತದ ತೀವ್ರತೆಗೆ ವಾಹನಗಳಲ್ಲಿ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದೆ.
ಬೆಂಕಿ ಹೊತ್ತಿಕೊಂಡ ವೇಳೆ ಕ್ಯಾಬಿನ್‌ನಲ್ಲಿ ಸಿಲುಕಿಕೊಂಡಿದ್ದ ಚಾಲಕ ದೀಕ್ಷಿತ್ (28) ಹೊರಬರಲು ಸಾಧ್ಯವಾಗದೆ ಸಜೀವ ದಹನವಾಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಆಂಧ್ರಪ್ರದೇಶ ಹಾಗೂ ಕರ್ನಾಟಕ ರಾಜ್ಯಗಳ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು