6:38 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್ ಒತ್ತಾಯ

02/01/2026, 23:37

ಬೆಂಗಳೂರು(reporterkarnataka.com): ಬಳ್ಳಾರಿಯಲ್ಲಿ ಗುಂಡು ಹಾರಿಸಿ ಒಬ್ಬರು ಮೃತಪಟ್ಟ ಘಟನೆ ಸಂಬಂಧ ಕೊಲೆ ಪ್ರಕರಣ ದಾಖಲಿಸಿ ಆ ಶಾಸಕರನ್ನು ಕೂಡಲೇ ಬಂಧಿಸಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಗ್ರಹಿಸಿದ್ದಾರೆ.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಇಂದು ಮಧ್ಯಾಹ್ನ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಭೇಟಿ ನೀಡಿದ್ದರು. ಬಳಿಕ ಆರ್. ಅಶೋಕ್ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಗೊತ್ತಿಲ್ಲದೇ ಗುಂಡು ಹಾರಿದೆ; ಗೊತ್ತಿಲ್ಲದೇ ಸತ್ತಿದ್ದಾರೆ ಎಂದು ನಾಳೆ ಹೇಳಬಹುದು ಎಂದು ತಿಳಿಸಿದರು. ಇವರು ನಾಳೆ ಏನು ಹೇಳಬಹುದೆಂದು ಇವತ್ತೇ ಹೇಳಿದ್ದೇನೆ. ಇವರಿಗೆ ನಾಚಿಕೆ ಆಗುವುದಿಲ್ಲವೇ ಎಂದು ಕೇಳಿದರು.
ಅವರು ಜನಾರ್ದನ ರೆಡ್ಡಿ ಮನೆ ಕಾಂಪೌಂಡಿಗೆ ಹೋಗಿ ಹೇಗೆ ಬ್ಯಾನರ್ ಕಟ್ಟಿದರು? ನಾವು ಪೊಲೀಸ್ ದೂರು ಕೊಟ್ಟಿದ್ದೇವೆ. ಆದರೂ ಎಫ್‍ಐಆರ್ ಆಗಿಲ್ಲ. ಅವರು ಕೊಟ್ಟ ದೂರಿಗೆ ಸಂಬಂಧಿಸಿ ಪಟಾಪಟ್ ಎಫ್‍ಐಆರ್ ಮಾಡಿದ್ದಾರೆ ಎಂದು ಟೀಕಿಸಿದರು.
ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದ ಈ ನಿಯೋಗದಲ್ಲಿ ವಿಧಾನ ಪರಿಷತ್ತಿನ ವಿಪಕ್ಷದ ಮುಖ್ಯ ಸಚೇತಕÀ ಎನ್.ರವಿಕುಮಾರ್, ಶಾಸಕರಾದ ಸಿ.ಸಿ. ಪಾಟೀಲ್, ಮಹೇಶ್ ಟೆÉಂಗಿನಕಾಯಿ, ವಿಧಾನ ಪರಿಷತ್ತಿನ ಸದಸ್ಯ ಕೇಶವ ಪ್ರಸಾದ್, ಜಿಲ್ಲಾಧ್ಯಕ್ಷರಾದ ಎಸ್.ಹರೀಶ್, ಸಪ್ತಗಿರಿ ಗೌಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು