6:31 PM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಬೆಳ್ಮಣ್: ರೇಶನ್ ನಲ್ಲಿ ಕಲಬೆರಕೆಯ ಅಕ್ಕಿ ವಿತರಣೆ; ತನಿಖೆಗೆ ಪಡಿತರ ಚೀಟಿ ಸಂಘದ ರಾಜ್ಯಾಧ್ಯಕ್ಷ ಆಗ್ರಹ

28/05/2021, 14:51

ಡಿ.ಆರ್ .ಜಗದೀಶ್ ದೇವಲಾಪುರ ನಾಗಮಂಗಲ

info.reporterkarnataka@gmail.com

ರಾಜ್ಯದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮ ವ್ಯಾಪ್ತಿಯಲ್ಲಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಸೇರಿಸಿ ವಿತರಿಸಿದ್ದು, ತಕ್ಷಣ ಉತ್ತಮ ಅಕ್ಕಿ ನೀಡಬೇಕು ಹಾಗೂ ಈ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ರಾಜ್ಯ ಪಡಿತರ ಚೀಟಿ ಸಂಘದ ರಾಜ್ಯಾಧ್ಯಕ್ಷ ಕೆ. ಕೃಷ್ಣಪ್ಪ ಅವರು ಆಗ್ರಹಿಸಿದ್ದಾರೆ. 

ಅವರಿಂದು ಮಾಧ್ಯಮದೊಂದಿಗೆ ಮಾತನಾಡುತ್ತ ರಾಜ್ಯದ ಕಾರ್ಕಳ ತಾಲ್ಲೂಕಿನ ಬೆಳ್ಮಣ್ ಗ್ರಾಮದಲ್ಲಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಕಲಬೆರಿಕೆಯಾಗಿ ಗ್ರಾಹಕರಿಗೆ ಈಗಾಗಲೇ ನೀಡಿದ್ದು, ಗ್ರಾಮದ ಜನತೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಗಮನಿಸಿ ಆತಂಕ ವ್ಯಕ್ತಪಡಿಸಿದ್ದಾರೆ. ಆಹಾರ ಇಲಾಖೆ ಈ ರೀತಿ ಪೂರೈಸಿರುವುದು ಹಾಗೂ ಖರೀದಿ ಮಾಡಿರುವುದು ಎಲ್ಲಿಂದ ಹಾಗೂ ಯಾವ ಸಹಕಾರ ಸಂಘ ಖರೀದಿ ಮಾಡಿದ್ದು  ಎಂಬ ಬಗ್ಗೆ ತನಿಖೆ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರ ಆಹಾರ ಇಲಾಖೆ ಸಂಬಂಧಪಟ್ಟ ಮಂತ್ರಿ ಯಾವುದೇ ಕ್ರಮ ಕೈಗೊಳ್ಳದೆ ಮೌನವಹಿಸಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ರಾಜ್ಯದಲ್ಲಿ ವಿವಿಧಡೆ ಕಲಬೆರಕೆಯ ಇಂತಹ ಪ್ರಕರಣದ ದೂರುಗಳು ಬಂದರೂ ಸಂಬಂಧಪಟ್ಟ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು