3:56 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಬೆಳ್ಮಣ್: ರೇಶನ್ ನಲ್ಲಿ ಕಲಬೆರಕೆಯ ಅಕ್ಕಿ ವಿತರಣೆ; ತನಿಖೆಗೆ ಪಡಿತರ ಚೀಟಿ ಸಂಘದ ರಾಜ್ಯಾಧ್ಯಕ್ಷ ಆಗ್ರಹ

28/05/2021, 14:51

ಡಿ.ಆರ್ .ಜಗದೀಶ್ ದೇವಲಾಪುರ ನಾಗಮಂಗಲ

info.reporterkarnataka@gmail.com

ರಾಜ್ಯದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮ ವ್ಯಾಪ್ತಿಯಲ್ಲಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಸೇರಿಸಿ ವಿತರಿಸಿದ್ದು, ತಕ್ಷಣ ಉತ್ತಮ ಅಕ್ಕಿ ನೀಡಬೇಕು ಹಾಗೂ ಈ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ರಾಜ್ಯ ಪಡಿತರ ಚೀಟಿ ಸಂಘದ ರಾಜ್ಯಾಧ್ಯಕ್ಷ ಕೆ. ಕೃಷ್ಣಪ್ಪ ಅವರು ಆಗ್ರಹಿಸಿದ್ದಾರೆ. 

ಅವರಿಂದು ಮಾಧ್ಯಮದೊಂದಿಗೆ ಮಾತನಾಡುತ್ತ ರಾಜ್ಯದ ಕಾರ್ಕಳ ತಾಲ್ಲೂಕಿನ ಬೆಳ್ಮಣ್ ಗ್ರಾಮದಲ್ಲಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಕಲಬೆರಿಕೆಯಾಗಿ ಗ್ರಾಹಕರಿಗೆ ಈಗಾಗಲೇ ನೀಡಿದ್ದು, ಗ್ರಾಮದ ಜನತೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಗಮನಿಸಿ ಆತಂಕ ವ್ಯಕ್ತಪಡಿಸಿದ್ದಾರೆ. ಆಹಾರ ಇಲಾಖೆ ಈ ರೀತಿ ಪೂರೈಸಿರುವುದು ಹಾಗೂ ಖರೀದಿ ಮಾಡಿರುವುದು ಎಲ್ಲಿಂದ ಹಾಗೂ ಯಾವ ಸಹಕಾರ ಸಂಘ ಖರೀದಿ ಮಾಡಿದ್ದು  ಎಂಬ ಬಗ್ಗೆ ತನಿಖೆ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರ ಆಹಾರ ಇಲಾಖೆ ಸಂಬಂಧಪಟ್ಟ ಮಂತ್ರಿ ಯಾವುದೇ ಕ್ರಮ ಕೈಗೊಳ್ಳದೆ ಮೌನವಹಿಸಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ರಾಜ್ಯದಲ್ಲಿ ವಿವಿಧಡೆ ಕಲಬೆರಕೆಯ ಇಂತಹ ಪ್ರಕರಣದ ದೂರುಗಳು ಬಂದರೂ ಸಂಬಂಧಪಟ್ಟ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು