3:34 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಬೆಳ್ಮಣ್: ರೇಶನ್ ನಲ್ಲಿ ಕಲಬೆರಕೆಯ ಅಕ್ಕಿ ವಿತರಣೆ; ತನಿಖೆಗೆ ಪಡಿತರ ಚೀಟಿ ಸಂಘದ ರಾಜ್ಯಾಧ್ಯಕ್ಷ ಆಗ್ರಹ

28/05/2021, 14:51

ಡಿ.ಆರ್ .ಜಗದೀಶ್ ದೇವಲಾಪುರ ನಾಗಮಂಗಲ

info.reporterkarnataka@gmail.com

ರಾಜ್ಯದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮ ವ್ಯಾಪ್ತಿಯಲ್ಲಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಸೇರಿಸಿ ವಿತರಿಸಿದ್ದು, ತಕ್ಷಣ ಉತ್ತಮ ಅಕ್ಕಿ ನೀಡಬೇಕು ಹಾಗೂ ಈ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ರಾಜ್ಯ ಪಡಿತರ ಚೀಟಿ ಸಂಘದ ರಾಜ್ಯಾಧ್ಯಕ್ಷ ಕೆ. ಕೃಷ್ಣಪ್ಪ ಅವರು ಆಗ್ರಹಿಸಿದ್ದಾರೆ. 

ಅವರಿಂದು ಮಾಧ್ಯಮದೊಂದಿಗೆ ಮಾತನಾಡುತ್ತ ರಾಜ್ಯದ ಕಾರ್ಕಳ ತಾಲ್ಲೂಕಿನ ಬೆಳ್ಮಣ್ ಗ್ರಾಮದಲ್ಲಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಕಲಬೆರಿಕೆಯಾಗಿ ಗ್ರಾಹಕರಿಗೆ ಈಗಾಗಲೇ ನೀಡಿದ್ದು, ಗ್ರಾಮದ ಜನತೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಗಮನಿಸಿ ಆತಂಕ ವ್ಯಕ್ತಪಡಿಸಿದ್ದಾರೆ. ಆಹಾರ ಇಲಾಖೆ ಈ ರೀತಿ ಪೂರೈಸಿರುವುದು ಹಾಗೂ ಖರೀದಿ ಮಾಡಿರುವುದು ಎಲ್ಲಿಂದ ಹಾಗೂ ಯಾವ ಸಹಕಾರ ಸಂಘ ಖರೀದಿ ಮಾಡಿದ್ದು  ಎಂಬ ಬಗ್ಗೆ ತನಿಖೆ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರ ಆಹಾರ ಇಲಾಖೆ ಸಂಬಂಧಪಟ್ಟ ಮಂತ್ರಿ ಯಾವುದೇ ಕ್ರಮ ಕೈಗೊಳ್ಳದೆ ಮೌನವಹಿಸಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ರಾಜ್ಯದಲ್ಲಿ ವಿವಿಧಡೆ ಕಲಬೆರಕೆಯ ಇಂತಹ ಪ್ರಕರಣದ ದೂರುಗಳು ಬಂದರೂ ಸಂಬಂಧಪಟ್ಟ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು