8:35 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಅಪ್ರಾಪ್ತೆಯ ಮನೆಗೆ ದಿನಾ ತಡರಾತ್ರಿ ಬರುತ್ತಿದ್ದ ಯುವಕ; ಕಾದು ಕುಳಿತು ಸೆರೆ ಹಿಡಿದ ಸ್ಥಳೀಯರು!

03/09/2022, 23:15

ಬೆಳ್ತಂಗಡಿ(reporterkarnataka.com): ದಿನಾ ತಡರಾತ್ರಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮನೆಗೆ 
ಬಂದು ಆಕೆಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಿಡ್ಲೆ ಸಮೀಪ ನಡೆದಿದೆ.

ಯುವಕ ಅಪ್ರಾಪ್ತ ಸ್ನೇಹಿತೆಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ್ದು, ಆತನ ವಿರುದ್ದ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ.

ನಿಡ್ಲೆ ಕುದ್ರಾಯ ಸಮೀಪ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಬೈಕ್ ನಿಲ್ಲಿಸಲಾಗುತ್ತಿದ್ದ ವ್ಯಕ್ತಿ ಯಾರು ಎಂಬುದು ಇಲ್ಲಿನ ಸ್ಥಳೀಯರ ಬಹುದೊಡ್ಡ ಪ್ರಶ್ನೆಯಾಗಿತ್ತು. ಅಲ್ಲದೇ ಅಕ್ರಮ ಸಂಬಂಧ ಎಂಬ ಸುದ್ದಿ ಹಬ್ಬಿದ್ದು ಸ್ಥಳೀಯ ಕೆಲ ಕೆಂಪು ಬೈಕು ಹೊಂದಿದವರ ಮೇಲೆ ಅನುಮಾನದ ಮಾತುಗಳು ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ನಿನ್ನೆ ತಡರಾತ್ರಿ ಬೈಕ್ ಇದ್ದದ್ದನ್ನು ಗಮನಿಸಿದ ಸ್ಥಳೀಯರು, ಆತ ಯಾರು ಎಂದು ತಿಳಿಯಲು ರಾತ್ರಿ ಕಾದು ಮುಂಜಾನೆ 5ರ ವೇಳೆಗೆ ಆತನನ್ನು ಹಿಡಿದಿದ್ದಾರೆ.

ಇನ್ನು ಧರ್ಮಸ್ಥಳ ಸಮೀಪದ ಅಶೋಕನಗರದ ನಿವಾಸಿಯಾಗಿರುವ ಈ ಯುವಕ, ತನ್ನ ಸ್ನೇಹಿತೆ ಅಪ್ರಾಪ್ತ ಬಾಲಕಿಯೋರ್ವಳೊಂದಿಗೆ ಸಂಬಂಧ ಇಟ್ಟುಕೊಂಡಿರುವುದಾಗಿ ತಿಳಿದು ಬಂದಿದೆ.

ಅಲ್ಲದೇ ಆತ ತಡರಾತ್ರಿ ಸ್ನೇಹಿತೆಯ ಮನೆಗೆ ಬಂದು ಮನೆಯವರಿಗೆ ತಿಳಿಯದಂತೆ ಆಕೆಯೊಂದಿಗೆ ಸಂಪರ್ಕ ಬೆಳೆಸಿದ್ದ, ಇದನ್ನು ಕಂಡ ಸ್ಥಳೀಯರು ಆತನನ್ನು ಹಿಡಿದಿದ್ದಾರೆ.

ಸದ್ಯ ಬಾಲಕಿಯ ಕಡೆಯವರ ದೂರಿನ ಹಿನ್ನಲೆಯಲ್ಲಿ ಯುವಕನ ಮೇಲೆ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು