6:26 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಬೆಳ್ತಂಗಡಿ ಸಮೀಪದ ಕಕ್ಕಿಂಜೆ ಬಳಿ ಕಾರಿನ ಮೇಲೆ ಕಾಡಾನೆ ದಾಳಿ: ಕಾರನ್ನೊಮ್ಮೆ ಮೇಲಕ್ಕೆತ್ತಿದ ಸಲಗ; ಭಯಭೀತರಾದ ಗ್ರಾಮಸ್ಥರು

27/11/2023, 22:00

ಬೆಳ್ತಂಗಡಿ(reporterkarnataka.com): ಪಶ್ಚಿಮಘಟ್ಟ ತಪ್ಪಲು ಪ್ರದೇಶದಲ್ಲಿ ಕಾಡಾನೆ ಹಾವಳಿ ಮತ್ತೆ ಶುರುವಾಗಿದೆ. ಕಕ್ಕಿಂಜೆ ಸಮೀಪ ಕಾಡಾನೆಯೊಂದು ಕಾರೊಂದರ ಮೇಲೆ ದಾಳಿ ನಡೆಸಿ, ದಾಂಧಲೆ ನಡೆಸಿದೆ.
ಕಕ್ಕಿಂಜೆಯ ಬಯಲುಬಸ್ತಿಯಲ್ಲಿ ಸೋಮವಾರ ಕತ್ತಲೆ ಆವರಿಸುತ್ತಿದ್ದಂತೆ ಕಾಡಾನೆಯ ಆಗಮನವಾಗಿದೆ. ಆನೆ ಬರುವುದನ್ನು ಕಂಡು ಚಾಲಕರು ಕಾರನ್ನು ಬದಿಗೆ ನಿಲ್ಲಿಸಿದ್ದಾರೆ. ಆದರೆ ನೇರವಾಗಿ ಕಾರಿನತ್ತ ಆಗಮಿಸಿದ ಕಾಡಾನೆ ಕಾರಿನ ಮುಂಭಾಗವನ್ನು ಮೇಲಕ್ಕೆತ್ತಿ ಕೆಳಗೆ ಬಿಟ್ಟಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಆನೆ ಬಳಿಕ ಜಾಗ ಖಾಲಿ ಮಾಡಿ ಕಾಡಿನತ್ತ ತೆರಳಿದೆ. ಈ ಘಟನೆಯಿಂದ ಸ್ಥಳೀಯರು ಭಯಭೀತರಾಗಿದ್ದಾರೆ. ಇತ್ತೀಚೆಗೆ ಕಡಬ ಸಮೀಪದ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಈ ಹಿಂದೆ ಸುಳ್ಯ ಸಮೀಪದ ಮಂಡೆಕೋಲು ಸುತ್ತ ಮುತ್ತಲಿನ ಪ್ರದೇಶದಲ್ಲಿ ಕಾಡಾನೆ ಉಪಟಳ ತೀವ್ರವಾಗಿತ್ತು.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಲವು ಪ್ರದೇಶಗಳು ಈಗಾಗಲೇ ಕಾಡಾನೆ ಹಾವಳಿಗೆ ತುತ್ತಾಗಿದೆ. 2 ತಿಂಗಳ ಅವಧಿಯಲ್ಲಿ ಇಲ್ಲಿ ಸಲಗ ದಾಳಿಗೆ ಮೂವರು ಸಾವನ್ನಪ್ಪಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು