6:41 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ಗ್ರಾಮಲೋಕ ಕಾರ್ಯಕ್ರಮ

02/07/2024, 19:32

ಬೆಳ್ತಂಗಡಿ(reporterkarnataka.com): ಸಾಹಿತ್ಯ ಅಕಾಡೆಮಿ, ಹೊಸದಿಲ್ಲಿ ಮತ್ತು ಮಂಗ್ಳುರ್ಚಿ ಮೊತಿಯಾಂ ಸಾಂಸ್ಕೃತಿಕ ಸಂಘಟನೆಯ ಜಂಟಿ ಆಶ್ರಯದಲ್ಲಿ ಬೆಳ್ತಂಗಡಿ ಪ್ರಧಾನ ರಸ್ತೆಯ ಲೋಬೊ ಮೋಟಾರ್ಸ್ ಆವರಣದಲ್ಲಿ ಗ್ರಾಮಲೋಕ ಕಾರ್ಯಕ್ರಮ ಭಾನುವಾರ ನಡೆಯಿತು.
ಬೆಳ್ತಂಗಡಿ ಧರ್ಮ ಕ್ಷೇತ್ರದ ಪ್ರಧಾನ ಧರ್ಮಗುರು ಫಾ| ವಾಲ್ಟರ್ ಡಿಮೆಲ್ಲೊ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಸಂದೇಶದಲ್ಲಿ ಫಾ| ಡಿ’ಮೆಲ್ಲೊ “ಕೊಂಕಣಿ ಭಾಷೆ ವೈವಿಧ್ಯತೆಗಳಿಂದ ಕೂಡಿದ ಎಲ್ಲರನ್ನೂ ಒಳಗೊಳ್ಳುವ ಪ್ರೀತಿಯ ಭಾಷೆ. ವೈಶಿಷ್ಠ್ಯಪೂರ್ಣ ಜಾನಪದ ಮತ್ತು ಗುಣಮಟ್ಟದ ಸಾಹಿತ್ಯ ಪರಂಪರೆ ಕೊಂಕಣಿಗೆ ಭಾಷೆಗೆ ಬಳುವಳಿಯಾಗಿ ಲಭಿಸಿದೆ. ಕೊಂಕಣಿ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವುದರ ಜತೆಗೆ, ಕೊಂಕಣಿ ಭಾಷೆಯಲ್ಲಿ ಪರಕೀಯ ಶಬ್ದಗಳ ನುಸುಳುವಿಕೆಯನ್ನು ತಡೆದು ವಿಶಿಷ್ಠತೆಯನ್ನು ಕಾಪಾಡುವ ಜವಾಬ್ದಾರಿಯೂ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಹಿರಿಯ ಕೊಂಕಣಿ ಸಾಹಿತಿಗಳು, ಕಲಾವಿದರಿಂದ ಜಾಗೃತಿ ಮೂಡಿಸುವ ಕೆಲಸಗಳಾಗಬೇಕು” ಎಂದು ಕರೆಕೊಟ್ಟರು.


ಕೇಂದ್ರ ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗ ಮುಖ್ಯಸ್ಥ ಕವಿ ಮೆಲ್ವಿನ್ ರೊಡ್ರಿಗಸ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಾಹಿತ್ಯ ಅಕಾಡೆಮಿ ಕಾರ್ಯಕ್ರಮಗಳ ಬಗ್ಗೆ ವಿವರ ನೀಡಿದರು ಮತ್ತು ಅತಿಥಿಗಳನ್ನು ಪರಿಚಯಿಸಿ ಸ್ವಾಗತ ಕೋರಿದರು.
ಕೇಂದ್ರ ಸಾಹಿತ್ಯ ಅಕಾಡೆಮಿ, ಕೊಂಕಣಿ ಸಲಹಾ ಸಮಿತಿ ಸದಸ್ಯ ಎಚ್. ಎಂ. ಪೆರ್ನಾಲ್ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮಲೋಕ ಕಾರ್ಯಕ್ರಮದಲ್ಲಿ ಸ್ಥಳೀಯ ಕವಿಗಳಾದ ರೋಬರ್ಟ್ ಡಿ ಸೋಜಾ ಮಡಂತ್ಯಾರ್, ಫ್ಲಾವಿಯಾ ಅಲ್ಬುಕೆರ್ಕ್, ಪುತ್ತೂರ್, ತೆಲ್ಮಾ ಮಾಡ್ತಾ, ಮಡಂತ್ಯಾರ್ ಸ್ವರಚಿತ ಕವಿತೆಗಳನ್ನು ವಾಚಿಸಿದರು. ಗುರುವಾಯನಕೆರೆಯ ವಿದ್ಯಾ ನಾಯಕ್ ಕೊಂಕಣಿ ಶಿಶುಗೀತೆಗಳನ್ನು ಪ್ರಸ್ತುತಪಡಿಸಿ, ಶಿಶುಗೀತೆಗಳ ಹಿನ್ನೆಲೆ, ಔಚಿತ್ಯ ಮತ್ತು ಪ್ರಸ್ತುತ ಪರಿಸ್ಥಿತಿಯ ಬಗ್ಗೆ ವಿಸ್ತಾರ ಮಾಹಿತಿ ನೀಡಿದರು. ಅಪೊಲಿನ್ ಡಿಸೋಜಾ ಮತ್ತು ತಂಡದವರು ಕೊಂಕಣಿ ಜೋಗುಳ ಹಾಡುಗಳನ್ನು ಸುಶ್ಯಾವ್ಯವಾಗಿ ಹಾಡಿ ಮಾಹಿತಿ ನೀಡಿದರು. ರೊನಾಲ್ಡ್ ಲೋಬೊ, ರೊನಾಲ್ದ್ ಡಿಸೋಜಾ ಮತ್ತು ಆರ್ವಿನ್ ಡಿಸೋಜಾ ಕೊಂಕಣಿ ಹಾಡುಗಳನ್ನು ಹಾಡುವುದರ ಮೂಲಕ ರಂಜಿಸಿದರು.
ಕೇಂದ್ರ ಸಾಹಿತ್ಯ ಅಕಾಡೆಮಿ ಕೊಂಕಣಿ ಸಲಹಾ ಸಮಿತಿಯ ಸದಸ್ಯ ಸ್ಟ್ಯಾನಿ ಬೇಳ ಕಾರ್ಯಕ್ರಮ ನಿರೂಪಿಸಿದರು. ಮಂಗ್ಳುರ್ಚಿ ಮೊತಿಯಾಂ ಸಂಘಟನೆಯ ವತಿಯಿಂದ ಅಲ್ಪೋನ್ಸ್ ಮೆಂಡೋನ್ಸಾ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು