12:20 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನಕ್ಕೆ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಸಂತಾಪ

08/05/2024, 20:18

ಮಂಗಳೂರು(reporterkarnataka.com): ಬೆಳ್ತಂಗಡಿ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ಕೆ. ವಸಂತ ಬಂಗೇರ ನಿಧನಕ್ಕೆ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಸಂತಾಪ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ರಾಜಕೀಯ ಮುತ್ಸದ್ದಿ, ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ, ಕಾಂಗ್ರೆಸ್ ಮುಖಂಡ, ನನ್ನ ಮಾಗದರ್ಶಕರು, ಬೆಳ್ತಂಗಡಿಯ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ ನಿಧನ ಸುದ್ದಿ ನೋವು ತಂದಿದೆ. ದ.ಕ ಜಿಲ್ಲೆಗೆ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಅವರ ಕೊಡುಗೆ ಅಪಾರ. ಮೊನ್ನೆ ಮೊನ್ನೆಯವರೆಗೂ ತಮ್ಮ ಪರವಾಗಿ ಚುನಾವಣಾ ಪ್ರಚಾರಕ್ಕೆ ಮಾರ್ಗದರ್ಶನ ಮಾಡುತ್ತಾ, ಕಾಂಗ್ರೆಸ್ ಕಾರ್ಯಕರ್ತರನ್ನು ಹುರಿದುಂಬಿಸುತ್ತಿದ್ದರು. ವಸಂತ ಬಂಗೇರ ಅವರ ನಿಧನದಿಂದ ಕಾಂಗ್ರೆಸ್ ಪಕ್ಷ ಬಡವಾಗಿದೆ. ಸದಾ ಕ್ರೀಯಾಶೀಲರಾಗಿದ್ದ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ದೇವರು ಸದ್ಗತಿ ಕರುಣಿಸಲಿ ಮತ್ತು ಕುಟುಂಬ ವರ್ಗ, ಬಂಧು ಮಿತ್ರರು, ಹಿತೈಷಿಗಳಿಗೆ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು