12:03 PM Friday15 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ?

ಇತ್ತೀಚಿನ ಸುದ್ದಿ

ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ; ಮಾಜಿ ಸಚಿವ ರೈ, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅಂತಿಮ ದರ್ಶನ

09/05/2024, 17:55

ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ನಾಯಕ ಕೆ. ವಸಂತ ಬಂಗೇರ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಬೆಳ್ತಂಗಡಿಯ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಮಾಜಿ ಸಚಿವ ಬಿ. ರಮಾನಾಥ ರೈ, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಸೇರಿದಂತೆ ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು.


ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವಸಂತ ಬಂಗೇರ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಬುಧವಾರ ಸಂಜೆ ನಿಧನರಾಗಿದ್ದರು. ಗುರುವಾರ ಮುಂಜಾನೆ ಅವರ ಪಾರ್ಥಿವ ಶರೀರವನ್ನು ಬೆಳ್ತಂಗಡಿಯ ನಿವಾಸಕ್ಕೆ ತರಲಾಗಿತ್ತು. ಅಲ್ಲಿ ಅಂತಿಮ ವಿಧಿ ವಿಧಾನ ನಡೆದ ಬಳಿಕ ಬೆಳ್ತಂಗಡಿ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು.
ವಸಂತ ಬಂಗೇರ ಅವರು ಬೆಳ್ತಂಗಡಿ ಕ್ಷೇತ್ರದಿಂದ 5 ಬಾರಿ ಶಾಸಕರಾಗಿ ಆಯ್ಕೆಗೊಂಡಿದ್ದರು. ತನ್ನದೇ ಆದ ಚರಿಷ್ಮಾದಿಂದ ಅವರು ಯಾವುದೇ ಪಕ್ಚದ ಹಂಗಿಲ್ಲದೆ ಗೆಲ್ಲುವ ಗಟ್ಟಿತನವನ್ನು ಹೊಂದಿದ್ದರು. ಬಿಜೆಪಿ, ಜನತಾದಳ ಹಾಗೂ ಕಾಂಗ್ರೆಸ್ ನಿಂದ ಆಯ್ಕೆಗೊಂಡಿರುವುದೇ ಇದಕ್ಕೆ ಸಾಕ್ಷಿ. ಬಡವರ ಪರ, ಶೋಷಿತರ ಪರ ಯಾವಾಗಲೂ ದೃಢವಾಗಿ ನಿಲ್ಲುತ್ತಿದ್ದ ಬಂಗೇರ ಅವರು ಬೆಳ್ತಂಗಡಿ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ತನ್ನ ಅನಾರೋಗ್ಯದ ನಡುವೆಯೂ ಸೌಜನ್ಯ ಪರ ಹೋರಾಟದಲ್ಲಿ ಧ್ವನಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು