4:33 PM Thursday12 - February 2026
ಬ್ರೇಕಿಂಗ್ ನ್ಯೂಸ್
ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು…

ಇತ್ತೀಚಿನ ಸುದ್ದಿ

ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ; ಮಾಜಿ ಸಚಿವ ರೈ, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅಂತಿಮ ದರ್ಶನ

09/05/2024, 17:55

ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ನಾಯಕ ಕೆ. ವಸಂತ ಬಂಗೇರ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಬೆಳ್ತಂಗಡಿಯ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಮಾಜಿ ಸಚಿವ ಬಿ. ರಮಾನಾಥ ರೈ, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಸೇರಿದಂತೆ ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು.


ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವಸಂತ ಬಂಗೇರ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಬುಧವಾರ ಸಂಜೆ ನಿಧನರಾಗಿದ್ದರು. ಗುರುವಾರ ಮುಂಜಾನೆ ಅವರ ಪಾರ್ಥಿವ ಶರೀರವನ್ನು ಬೆಳ್ತಂಗಡಿಯ ನಿವಾಸಕ್ಕೆ ತರಲಾಗಿತ್ತು. ಅಲ್ಲಿ ಅಂತಿಮ ವಿಧಿ ವಿಧಾನ ನಡೆದ ಬಳಿಕ ಬೆಳ್ತಂಗಡಿ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು.
ವಸಂತ ಬಂಗೇರ ಅವರು ಬೆಳ್ತಂಗಡಿ ಕ್ಷೇತ್ರದಿಂದ 5 ಬಾರಿ ಶಾಸಕರಾಗಿ ಆಯ್ಕೆಗೊಂಡಿದ್ದರು. ತನ್ನದೇ ಆದ ಚರಿಷ್ಮಾದಿಂದ ಅವರು ಯಾವುದೇ ಪಕ್ಚದ ಹಂಗಿಲ್ಲದೆ ಗೆಲ್ಲುವ ಗಟ್ಟಿತನವನ್ನು ಹೊಂದಿದ್ದರು. ಬಿಜೆಪಿ, ಜನತಾದಳ ಹಾಗೂ ಕಾಂಗ್ರೆಸ್ ನಿಂದ ಆಯ್ಕೆಗೊಂಡಿರುವುದೇ ಇದಕ್ಕೆ ಸಾಕ್ಷಿ. ಬಡವರ ಪರ, ಶೋಷಿತರ ಪರ ಯಾವಾಗಲೂ ದೃಢವಾಗಿ ನಿಲ್ಲುತ್ತಿದ್ದ ಬಂಗೇರ ಅವರು ಬೆಳ್ತಂಗಡಿ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ತನ್ನ ಅನಾರೋಗ್ಯದ ನಡುವೆಯೂ ಸೌಜನ್ಯ ಪರ ಹೋರಾಟದಲ್ಲಿ ಧ್ವನಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು