10:47 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಬೆಳ್ತಂಗಡಿಯ ಗಡಾಯಿಕಲ್ಲು ಏರಿ ಕನ್ನಡ ಧ್ವಜ ಹಾರಿಸಿದ ಕೋತಿರಾಜ್: ಮೆಟ್ಟಿಲುಗಳ ಸಹಾಯವಿಲ್ಲದೆ 1700 ಅಡಿಯೇರಿದ ಮಂಕಿಮ್ಯಾನ್!

12/02/2023, 23:29

ಬೆಳ್ತಂಗಡಿ(reporterkarnataka.com):
ಎತ್ತರದ ಕಟ್ಟಡ, ಐತಿಹಾಸಿಕ ಕೋಟೆ, ಪರ್ವತವನ್ನು ಸರಸರನೆ ಏರುವ ಜ್ಯೋತಿರಾಜ್ ಯಾನೆ ಕೋತಿರಾಜ್ ಅವರು ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ಗಡಾಯಿಕಲ್ಲನ್ನು ಯಾವುದೇ ಮೆಟ್ಟಿಲುಗಳ ಸಹಾಯವಿಲ್ಲದೆ ಸರಸರನೆ ಏರಿ ದಾಖಲೆ ನಿರ್ಮಿಸಿದ್ದಾರೆ.

ಕೋತಿ ರಾಜ್ ಅವರು ಭಾನುವಾರ 1700 ಅಡಿ ಎತ್ತರದ ಬೆಳ್ತಂಗಡಿಯ ಗಡಾಯಿಕಲ್ಲನ್ನು ಯಾವುದೇ ಮೆಟ್ಟಿಲುಗಳ ಸಹಾಯವಿಲ್ಲದೆ ಕೈಗಳ ಸಹಾಯದಿಂದ ಹತ್ತುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. 2 ತಾಸಿನಲ್ಲಿ ಅವರು ಗಡಾಯಿಕಲ್ಲಿನ ತುತ್ತ ತುದಿಯನ್ನೇರಿದ್ದಾರೆ. ಅಷ್ಟೇ ಅಲ್ಲದೆ ಗಡಾಯಿಕಲ್ಲಿನ ಮೇಲೆ ಕನ್ನಡ ಧ್ವಜವನ್ನು ಹಾರಿಸಿದ್ದಾರೆ.


ಸಮುದ್ರ ಮಟ್ಟದಿಂದ 1700 ಅಡಿ ಎತ್ತರದಲ್ಲಿರುವ
ಗಡಾಯಿಕಲ್ಲನ್ನು ಮೊದಲ ಬಾರಿಗೆ ಕೋತಿರಾಜ್ ಏರಿದ್ದಾರೆ. ಏರುವ ಮುನ್ನ ಸಮೀಪ ಚಂದ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ತೆಂಗಿನ ಕಾಯಿ ಒಡೆದಿದ್ದಾರೆ. 11.50 ರ ಸುಮಾರಿಗೆ ಗಡಾಯಿಕಲ್ಲು ತುತ್ತ ತುದಿ ಮುಟ್ಟುವಲ್ಲಿ ಅವರು ಯಶಸ್ವಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು