8:38 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಬೆಳ್ತಂಗಡಿಯ ಗಡಾಯಿಕಲ್ಲು ಏರಿ ಕನ್ನಡ ಧ್ವಜ ಹಾರಿಸಿದ ಕೋತಿರಾಜ್: ಮೆಟ್ಟಿಲುಗಳ ಸಹಾಯವಿಲ್ಲದೆ 1700 ಅಡಿಯೇರಿದ ಮಂಕಿಮ್ಯಾನ್!

12/02/2023, 23:29

ಬೆಳ್ತಂಗಡಿ(reporterkarnataka.com):
ಎತ್ತರದ ಕಟ್ಟಡ, ಐತಿಹಾಸಿಕ ಕೋಟೆ, ಪರ್ವತವನ್ನು ಸರಸರನೆ ಏರುವ ಜ್ಯೋತಿರಾಜ್ ಯಾನೆ ಕೋತಿರಾಜ್ ಅವರು ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ಗಡಾಯಿಕಲ್ಲನ್ನು ಯಾವುದೇ ಮೆಟ್ಟಿಲುಗಳ ಸಹಾಯವಿಲ್ಲದೆ ಸರಸರನೆ ಏರಿ ದಾಖಲೆ ನಿರ್ಮಿಸಿದ್ದಾರೆ.

ಕೋತಿ ರಾಜ್ ಅವರು ಭಾನುವಾರ 1700 ಅಡಿ ಎತ್ತರದ ಬೆಳ್ತಂಗಡಿಯ ಗಡಾಯಿಕಲ್ಲನ್ನು ಯಾವುದೇ ಮೆಟ್ಟಿಲುಗಳ ಸಹಾಯವಿಲ್ಲದೆ ಕೈಗಳ ಸಹಾಯದಿಂದ ಹತ್ತುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. 2 ತಾಸಿನಲ್ಲಿ ಅವರು ಗಡಾಯಿಕಲ್ಲಿನ ತುತ್ತ ತುದಿಯನ್ನೇರಿದ್ದಾರೆ. ಅಷ್ಟೇ ಅಲ್ಲದೆ ಗಡಾಯಿಕಲ್ಲಿನ ಮೇಲೆ ಕನ್ನಡ ಧ್ವಜವನ್ನು ಹಾರಿಸಿದ್ದಾರೆ.


ಸಮುದ್ರ ಮಟ್ಟದಿಂದ 1700 ಅಡಿ ಎತ್ತರದಲ್ಲಿರುವ
ಗಡಾಯಿಕಲ್ಲನ್ನು ಮೊದಲ ಬಾರಿಗೆ ಕೋತಿರಾಜ್ ಏರಿದ್ದಾರೆ. ಏರುವ ಮುನ್ನ ಸಮೀಪ ಚಂದ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ತೆಂಗಿನ ಕಾಯಿ ಒಡೆದಿದ್ದಾರೆ. 11.50 ರ ಸುಮಾರಿಗೆ ಗಡಾಯಿಕಲ್ಲು ತುತ್ತ ತುದಿ ಮುಟ್ಟುವಲ್ಲಿ ಅವರು ಯಶಸ್ವಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು