12:16 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಬೆಳ್ತಂಗಡಿಯ ಗಡಾಯಿಕಲ್ಲು ಏರಿ ಕನ್ನಡ ಧ್ವಜ ಹಾರಿಸಿದ ಕೋತಿರಾಜ್: ಮೆಟ್ಟಿಲುಗಳ ಸಹಾಯವಿಲ್ಲದೆ 1700 ಅಡಿಯೇರಿದ ಮಂಕಿಮ್ಯಾನ್!

12/02/2023, 23:29

ಬೆಳ್ತಂಗಡಿ(reporterkarnataka.com):
ಎತ್ತರದ ಕಟ್ಟಡ, ಐತಿಹಾಸಿಕ ಕೋಟೆ, ಪರ್ವತವನ್ನು ಸರಸರನೆ ಏರುವ ಜ್ಯೋತಿರಾಜ್ ಯಾನೆ ಕೋತಿರಾಜ್ ಅವರು ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ಗಡಾಯಿಕಲ್ಲನ್ನು ಯಾವುದೇ ಮೆಟ್ಟಿಲುಗಳ ಸಹಾಯವಿಲ್ಲದೆ ಸರಸರನೆ ಏರಿ ದಾಖಲೆ ನಿರ್ಮಿಸಿದ್ದಾರೆ.

ಕೋತಿ ರಾಜ್ ಅವರು ಭಾನುವಾರ 1700 ಅಡಿ ಎತ್ತರದ ಬೆಳ್ತಂಗಡಿಯ ಗಡಾಯಿಕಲ್ಲನ್ನು ಯಾವುದೇ ಮೆಟ್ಟಿಲುಗಳ ಸಹಾಯವಿಲ್ಲದೆ ಕೈಗಳ ಸಹಾಯದಿಂದ ಹತ್ತುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. 2 ತಾಸಿನಲ್ಲಿ ಅವರು ಗಡಾಯಿಕಲ್ಲಿನ ತುತ್ತ ತುದಿಯನ್ನೇರಿದ್ದಾರೆ. ಅಷ್ಟೇ ಅಲ್ಲದೆ ಗಡಾಯಿಕಲ್ಲಿನ ಮೇಲೆ ಕನ್ನಡ ಧ್ವಜವನ್ನು ಹಾರಿಸಿದ್ದಾರೆ.


ಸಮುದ್ರ ಮಟ್ಟದಿಂದ 1700 ಅಡಿ ಎತ್ತರದಲ್ಲಿರುವ
ಗಡಾಯಿಕಲ್ಲನ್ನು ಮೊದಲ ಬಾರಿಗೆ ಕೋತಿರಾಜ್ ಏರಿದ್ದಾರೆ. ಏರುವ ಮುನ್ನ ಸಮೀಪ ಚಂದ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ. ತೆಂಗಿನ ಕಾಯಿ ಒಡೆದಿದ್ದಾರೆ. 11.50 ರ ಸುಮಾರಿಗೆ ಗಡಾಯಿಕಲ್ಲು ತುತ್ತ ತುದಿ ಮುಟ್ಟುವಲ್ಲಿ ಅವರು ಯಶಸ್ವಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು