1:35 AM Friday14 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಅರಣ್ಯ ಸಿಬ್ಬಂದಿಗಳ ಕಾರ್ಯಾಚರಣೆ; ಅಕ್ರಮವಾಗಿ ಸಾಗಿಸುತ್ತಿದ್ದ ಬೆಲೆಬಾಳುವ ಮರ ವಶ, 3 ಮಂದಿ ಸೆರೆ

01/02/2023, 00:08

ಬೆಳ್ತಂಗಡಿ(reporterkarnataka.com): ಅಕ್ರಮವಾಗಿ ಬೆಲೆಬಾಳುವ ಮರ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ಬೆಳ್ತಂಗಡಿ ತಾಲೂಕಿನ ಮೊಗ್ರುಗ್ರಾಮದ ಮುಗೇರಡ್ಕ ಎಂಬಲ್ಲಿಂದ ರಾತ್ರಿ ವೇಳೆ ದಾಳಿ ನಡೆಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಮರದ ದಿಮ್ಮಿ ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂದರು ಶಾಖಾ ಉಪ ವಲಯ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಖಚಿತ ಮಾಹಿತಿಯ ಮೇಲೆ ಮೊಗ್ರು ಗ್ರಾಮದ ಮುಗೇರಡ್ಕ ಎಂಬಲ್ಲಿ ಅಕ್ರಮವಾಗಿ ಹೆಬ್ಬಲಸು, ಮಾವು ಹಾಗೂ ಕಾಡು ಜಾತಿ ದಿಮ್ಮಿಗಳನ್ನು ಸಾಗಣೆ ಮಾಡುತ್ತಿರುವ ಲಾರಿಯನ್ನು ಪತ್ತೆ ಹಚ್ಚಿದ್ದರು.ಲಾರಿಗೆ ಬೆಂಗಾವಲಾಗಿ ಸಂಚರಿಸುತ್ತಿದ್ದ ಪಾಣೆ ಮಂಗಳೂರಿನ ಅಬ್ಬಾಸ್, ಕಡಬ ಮರ್ದಾಳದ ಇರ್ಫಾನ್, ಇಳಂತಿಲ ಗ್ರಾಮದ ಅಂಡೆತ್ತಡ್ಕ ನಿವಾಸಿಗಳಾದ ಅಶ್ರಫ್, ರಹಿಮಾನ್ ಮರ ಕಡಿದ ಸ್ಥಳದ ವಾರೀಸುದಾರ ಮುರ ಗ್ರಾಮದ ಕೃಷ್ಣಪ್ಪ ಹಾಗೂ ಲಾರಿ ಚಾಲಕ ಬಂಟ್ವಾಳದ ಬೋಗೋಡಿ ನಿವಾಸಿ ಅಶ್ರಫ್ ಅಂಬೋನು ಅವರ ವಿರುದ್ಧ ಅರಣ್ಯ ಸಂರಕ್ಷಣೆ ಕಾಯ್ದೆಯಂತೆ ದೂರು ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು