7:00 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬೆಳ್ತಂಗಡಿ: ಅರಣ್ಯ ಸಿಬ್ಬಂದಿಗಳ ಕಾರ್ಯಾಚರಣೆ; ಅಕ್ರಮವಾಗಿ ಸಾಗಿಸುತ್ತಿದ್ದ ಬೆಲೆಬಾಳುವ ಮರ ವಶ, 3 ಮಂದಿ ಸೆರೆ

01/02/2023, 00:08

ಬೆಳ್ತಂಗಡಿ(reporterkarnataka.com): ಅಕ್ರಮವಾಗಿ ಬೆಲೆಬಾಳುವ ಮರ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ಬೆಳ್ತಂಗಡಿ ತಾಲೂಕಿನ ಮೊಗ್ರುಗ್ರಾಮದ ಮುಗೇರಡ್ಕ ಎಂಬಲ್ಲಿಂದ ರಾತ್ರಿ ವೇಳೆ ದಾಳಿ ನಡೆಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಮರದ ದಿಮ್ಮಿ ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂದರು ಶಾಖಾ ಉಪ ವಲಯ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಖಚಿತ ಮಾಹಿತಿಯ ಮೇಲೆ ಮೊಗ್ರು ಗ್ರಾಮದ ಮುಗೇರಡ್ಕ ಎಂಬಲ್ಲಿ ಅಕ್ರಮವಾಗಿ ಹೆಬ್ಬಲಸು, ಮಾವು ಹಾಗೂ ಕಾಡು ಜಾತಿ ದಿಮ್ಮಿಗಳನ್ನು ಸಾಗಣೆ ಮಾಡುತ್ತಿರುವ ಲಾರಿಯನ್ನು ಪತ್ತೆ ಹಚ್ಚಿದ್ದರು.ಲಾರಿಗೆ ಬೆಂಗಾವಲಾಗಿ ಸಂಚರಿಸುತ್ತಿದ್ದ ಪಾಣೆ ಮಂಗಳೂರಿನ ಅಬ್ಬಾಸ್, ಕಡಬ ಮರ್ದಾಳದ ಇರ್ಫಾನ್, ಇಳಂತಿಲ ಗ್ರಾಮದ ಅಂಡೆತ್ತಡ್ಕ ನಿವಾಸಿಗಳಾದ ಅಶ್ರಫ್, ರಹಿಮಾನ್ ಮರ ಕಡಿದ ಸ್ಥಳದ ವಾರೀಸುದಾರ ಮುರ ಗ್ರಾಮದ ಕೃಷ್ಣಪ್ಪ ಹಾಗೂ ಲಾರಿ ಚಾಲಕ ಬಂಟ್ವಾಳದ ಬೋಗೋಡಿ ನಿವಾಸಿ ಅಶ್ರಫ್ ಅಂಬೋನು ಅವರ ವಿರುದ್ಧ ಅರಣ್ಯ ಸಂರಕ್ಷಣೆ ಕಾಯ್ದೆಯಂತೆ ದೂರು ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು