7:00 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಬೆಳ್ತಂಗಡಿ ಇಳಂತಿಲ ಬಳಿ ಪತ್ತೆಯಾದ ಗ್ರೆನೇಡ್ 40 ವರ್ಷ ಹಳೆಯದ್ದೇ?: ತನಿಖೆ ಆರಂಭ

08/11/2021, 09:18

ಮಂಗಳೂರು(reporterkarnataka.com): ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಬೇಲಿಯ ಬಳಿ ಪತ್ತೆಯಾಗಿ ಭಾರಿ ಆತಂಕ ಸೃಷ್ಟಿಸಿದ ಐದು ಗ್ರೆನೇಡ್‌ಗಳು ಸುಮಾರು 40 ವರ್ಷ ಹಳೆಯದ್ದು ಎಂದು ತಿಳಿದು ಬಂದಿದೆ.

ನಿವೃತ್ತ ಸೇನಾಧಿಕಾರಿ ಜಯಕುಮಾರ್ ಪೂಜಾರಿ ಅವರು ಉಪ್ಪಿನಂಗಡಿಯಿಂದ ಸಂಜೆ 6 ಗಂಟೆ ಸುಮಾರಿಗೆ ತಮ್ಮ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಗ್ರೆನೇಡ್‌ಗಳು ಪತ್ತೆಯಾಗಿವೆ. ಪ್ಲಾಸ್ಟಿಕ್ ಕವರ್‌ನಲ್ಲಿ ಒಂದು ಗ್ರೆನೇಡ್ ಹಾಗೂ ಉಳಿದ ನಾಲ್ಕು ಗ್ರೆನೇಡ್‌ಗಳು ನೆಲದ ಮೇಲೆ ಬಿದ್ದಿದ್ದವು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಅವುಗಳನ್ನು ಸುರಕ್ಷಿತವಾಗಿ ತಮ್ಮ ನಿವಾಸಕ್ಕೆ ತೆಗೆದುಕೊಂಡು ಹೋದ ಜಯಕುಮಾರ್ ಪೂಜಾರಿ ಅವರು ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ದಕ್ಷಿಣ ಕನ್ನಡ ಪೊಲೀಸರು ಗ್ರೆನೇಡ್ ವಶಪಡಿಸಿಕೊಂಡಿದ್ದಾರೆ. ಗ್ರೆನೇಡ್‌ಗಳು ಸುಮಾರು 40 ವರ್ಷಗಳಷ್ಟು ಹಳೆಯದಾಗಿವೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು