10:08 AM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಬೆಳ್ತಂಗಡಿ ಇಳಂತಿಲ ಬಳಿ ಪತ್ತೆಯಾದ ಗ್ರೆನೇಡ್ 40 ವರ್ಷ ಹಳೆಯದ್ದೇ?: ತನಿಖೆ ಆರಂಭ

08/11/2021, 09:18

ಮಂಗಳೂರು(reporterkarnataka.com): ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಬೇಲಿಯ ಬಳಿ ಪತ್ತೆಯಾಗಿ ಭಾರಿ ಆತಂಕ ಸೃಷ್ಟಿಸಿದ ಐದು ಗ್ರೆನೇಡ್‌ಗಳು ಸುಮಾರು 40 ವರ್ಷ ಹಳೆಯದ್ದು ಎಂದು ತಿಳಿದು ಬಂದಿದೆ.

ನಿವೃತ್ತ ಸೇನಾಧಿಕಾರಿ ಜಯಕುಮಾರ್ ಪೂಜಾರಿ ಅವರು ಉಪ್ಪಿನಂಗಡಿಯಿಂದ ಸಂಜೆ 6 ಗಂಟೆ ಸುಮಾರಿಗೆ ತಮ್ಮ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಗ್ರೆನೇಡ್‌ಗಳು ಪತ್ತೆಯಾಗಿವೆ. ಪ್ಲಾಸ್ಟಿಕ್ ಕವರ್‌ನಲ್ಲಿ ಒಂದು ಗ್ರೆನೇಡ್ ಹಾಗೂ ಉಳಿದ ನಾಲ್ಕು ಗ್ರೆನೇಡ್‌ಗಳು ನೆಲದ ಮೇಲೆ ಬಿದ್ದಿದ್ದವು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಅವುಗಳನ್ನು ಸುರಕ್ಷಿತವಾಗಿ ತಮ್ಮ ನಿವಾಸಕ್ಕೆ ತೆಗೆದುಕೊಂಡು ಹೋದ ಜಯಕುಮಾರ್ ಪೂಜಾರಿ ಅವರು ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ದಕ್ಷಿಣ ಕನ್ನಡ ಪೊಲೀಸರು ಗ್ರೆನೇಡ್ ವಶಪಡಿಸಿಕೊಂಡಿದ್ದಾರೆ. ಗ್ರೆನೇಡ್‌ಗಳು ಸುಮಾರು 40 ವರ್ಷಗಳಷ್ಟು ಹಳೆಯದಾಗಿವೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು