4:21 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಬೆಳ್ವೆ ಚರ್ಚ್ ಫಾದರ್ ವಿರುದ್ಧ ಅನುಯಾಯಿಗಳಿಂದ ಪ್ರತಿಭಟನೆ: ಕ್ರೈಸ್ತ ಧರ್ಮದಿಂದ ಮತಾಂತರ ಎಚ್ಚರಿಕೆ

25/10/2021, 08:34

ಕುಂದಾಪುರ(reporterkarnataka.com): ಬೆಳ್ವೆಯ ಚರ್ಚ್ ನ ಫಾದರ್ ವಿರುದ್ದ ಚರ್ಚ್ ಅನುಯಾಯಿಗಳು ಅಸಮಾಧಾನ ಹೊರ ಹಾಕಿ ಭಾನುವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರುಣಾಕರ್ ಶೆಟ್ಟಿ, ಇದು ಕೇವಲ ಒಂದು ಧರ್ಮದ ವಿಚಾರವಲ್ಲ. ಸಾಮರಸ್ಯದಿಂದ ಇರುವ ಚರ್ಚಿನ ಅನುಯಾಯಿಗಳಿಗೆ ತೊಂದರೆ ಆದರೆ ಬೆಳ್ವೆ ಗ್ರಾಮದ ಪ್ರತಿಯೊಬ್ಬರು ಇವರ ಪರ ನಿಲ್ಲುತ್ತಾರೆ. ಇವರಿಗೆ ತೊಂದರೆ ನೀಡುತ್ತಿರುವ ಫಾದರ್ ಅಲೆಕ್ಸಾಂಡರ್ ಲೂವೀಸ್ ಈ ಹಿಂದೆ ತಲ್ಲೂರಿನಲ್ಲಿ ಗಲಾಟೆ ಮಾಡಿಕೊಂಡು ಬಂದು ಇಲ್ಲಿಗೆ ವರ್ಗಾವಣೆಗೊಂಡವರು. ಇಲ್ಲಿಯೂ ಅದೇ ಸಮಸ್ಯೆಯನ್ನು ಹುಟ್ಟುಹಾಕುತ್ತಿದ್ದಾರೆ ಎಂದರು.

ಚರ್ಚ್ ನ ಅನುಯಾಯಿ ಪ್ರವೀಣಾ ಮಾತನಾಡಿ, ಕಳೆದ ಮೂರು ತಿಂಗಳಿನಿಂದ ಇಲ್ಲಿ ಅಶಾಂತಿ ನೆಲೆಸಿದೆ. ಫಾದರ್ ಅಲೆಗ್ಸಾಂಡರ್ ಲೂವಿಸ್ ನಮಗೆ ಚರ್ಚ್ ನ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಿಡುತ್ತಿಲ್ಲ. ನಾವು ಕಟ್ಟಿದ ಚರ್ಚ್ ನ ಕಟ್ಟಡಕ್ಕೆ ಹಾನಿ ಮಾಡುತ್ತಿದ್ದಾರೆ. ಉಡುಪಿ ಧರ್ಮಾಧ್ಯಕ್ಷರಿಗೆ ಮನವಿ ಮಾಡಿದರೇ ನಮಗೆ ನ್ಯಾಯ ದೊರಕಿಸಿ ಕೊಡಲಿಲ್ಲ. ಒಂದು ವೇಳೆ ವಾರದೊಳಗೆ ಅಲೆಗ್ಸಾಂಡರ್ ಅನ್ನು ವರ್ಗಾವಣೆ ಮಾಡದೇ ಇದ್ದರೇ ನಾವು ಕ್ರಿಶ್ಚಿಯನ್ ಧರ್ಮವನ್ನು ಬಿಟ್ಟು ಹೋಗುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು