2:37 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬೇನಾಮಿ ಆಸ್ತಿ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದ ದಾಖಲೆ ಅಸಲಿ; ಶಾಸಕ ಕೋಟ್ಯಾನ್ ಮಾನನಷ್ಟ ಮೊಕದ್ದಮೆ ಹೂಡಲಿ: ಮಿಥುನ್ ರೈ ಸವಾಲು

22/04/2023, 10:19

ಮಂಗಳೂರು(reporterkarnataka.com):ಶಾಸಕ ಉಮಾನಾಥ ಕೋಟ್ಯಾನ್ ಅವರ ಬೇನಾಮಿ ಆಸ್ತಿ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾದ ದಾಖಲೆ ಅಸಲಿಯಾಗಿದ್ದು, ಶಾಸಕರು ಮಾನನಷ್ಟ ಮೊಕದ್ದಮೆ ಹಾಕುವ ಕೆಲಸವನ್ನು ಬೇಗನೆ ಮಾಡಲಿ. ಅವರ ಸವಾಲನ್ನು ಸ್ವೀಕರಿಸಲು ಸಿದ್ದ ಎಂದು ಮೂಡುಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪ್ರತಿ ಸವಾಲು ಹಾಕಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಕೃಷಿ ಭೂಮಿಯನ್ನು ಕೈಗಾರಿಕೆಗಾಗಿ ಸ್ವಾಧೀನ ಪಡಿಸಿಕೊಳ್ಳಲು ಸರಕಾರದ ಹಂತದಲ್ಲಿ ನಡೆಸಿರುವ ಪತ್ರಗಳ ದೃಢೀಕೃತ ಪ್ರತಿಗಳನ್ನು ಪಡೆದು ಹೇಳಿಕೆ ನೀಡಿದ್ದೇನೆ ಎಂದರು.
ಆಧಾರ ರಹಿತ ಹೇಳಿಕೆ ನೀಡುವುದಕ್ಕೆ ನನಗೆ ಉಮಾನಾಥ ಕೋಟ್ಯಾನ್ ಅವರ ಮೇಲೆ ಯಾವುದೇ ವೈಯಕ್ತಿ ದ್ವೇಷ ಇಲ್ಲ. ಈ ಬಗ್ಗೆ ಯಾವ ದೈವದ ಮುಂದೆ ಈ ಪ್ರದೇಶದ ಜನರ ಮುಂದೆ ನಮ್ಮ ಮಾತುಗಳನ್ನು ಪುನರುಚ್ಚರಿಸುತ್ತೇವೆ. ನಾವು ಸತ್ಯವನ್ನೇ ಹೇಳುತ್ತಿದ್ದೇವೆ. ಯಾರನ್ನೂ ತೇಜೋವಧೆ ಮಾಡುವ ಅಗತ್ಯ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಶಾಸಕ ಉಮಾನಾಥ ಕೋಟ್ಯಾನ್ ಕರ್ನಿರೆ, ಅತಿಕಾರಿ ಬೆಟ್ಟು, ಬಳ್ಕುಂಜೆ, ಕೊಲ್ಲೂರು, ಉಳಿಪ್ಪಾಡಿಯಲ್ಲಿ 800 ರಿಂದ 900 ಎಕರೆ ಭೂಮಿ ಕೈಗಾರಿಕಾ ಉದ್ದೇಶಕ್ಕೆ ನೀಡಲು ಜನರು ಸಿದ್ದರಾಗಿದ್ದಾರೆ. ಲಭ್ಯ ವಿರುವ ಈ ಭೂಮಿಯನ್ನು ಸರ್ಕಾರ ಸ್ವಾಧೀನ ಪಡಿಸಿಕೊಳ್ಳಲು ಅಂದಿನ ಕೈಗಾರಿಕಾ ಸಚಿವರಾಗಿದ್ದ ಜಗದೀಶ್ ಶೆಟ್ಟರ್ ಅವರಿಗೆ ಬರೆದಿರುವ ಪತ್ರ ಪ್ರತಿಯನ್ನು ಮತ್ತು ಮುಖ್ಯಮಂತ್ರಿ ವತಿಯಿಂದ ಶಾಸಕ ಉಮಾನಾಥ ಕೊಟ್ಯಾನ್ ರಿಗೆ ನೀಡಲಾದ ಟಿಪ್ಪಣಿ ಪ್ರತಿಗಳನ್ನು ಸುದ್ದಿಗೋಷ್ಠಿಯಲ್ಲಿ ಹಾಜರು ಪಡಿಸಿದದರು. ಈ ದಾಖಲೆಗಳನ್ನು ನಕಲಿ ಎಂದು ಉಮಾನಾಥ ಕೋಟ್ಯಾನ್ ಸಾಬೀತು ಪಡಿಸಲಿ ಎಂದು ಸವಾಲು ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು