10:03 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಬೆಂದೂರುವೆಲ್ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಆಕಸ್ಮಿಕ: ಅಪಾರ ಹಾನಿ;   ದುರಂತಕ್ಕೆ ಏನು ಕಾರಣ?

10/01/2022, 11:39

ಮಂಗಳೂರು(reporterkarnataka.com): ನಗರದ ಬೆಂದೂರುವೆಲ್‌ ನ ಪ್ಯಾರಾಮೌಂಟ್ ಕಟ್ಟಡದಲ್ಲಿರುವ ಎಲ್‌ಜಿ ಶೋ ರೂಂನಲ್ಲಿ ಅಗ್ನಿ ಆಕಸ್ಮಿಕವಾಗಿ ಸಂಭವಿಸಿದ್ದು, ಅಪಾರ ನಷ್ಟ ಸಂಭವಿಸಿದೆ.

ಇಲ್ಲಿ ಅಕ್ಕಪಕ್ಕದಲ್ಲಿ ಹಲವು ಕಟ್ಟಡಗಳಿದ್ದು, ಅಗ್ನಿ ಆಕಸ್ಮಿಕದಿಂದಾಗಿ ಅವರು ಆತಂಕವನ್ನು ಎದುರಿಸಬೇಕಾಯಿತು. ಬೆಂಕಿ ಹಿಡಿಯಲು ಶಾರ್ಟ್‌ ಸರ್ಕ್ಯೂಟ್‌ ಕಾರಣ ಎಂದು ಹೇಳಲಾಗಿದೆ. 

ಗಣೇಶ್ ಪ್ರಭು ಮಾಲಕತ್ವದ ಭುವನೇಂದ್ರ ಎಂಟರ್‌ ಪ್ರೈಸಸ್‌ನ ಎಲ್‌ ಶೋರೂಂ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಅಪಾರ ಮೌಲ್ಯದ ವಿದ್ಯುತ್ ಪರಿಕರಗಳು ಸೇರಿದಂತೆ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ.

ಅಂಗಡಿ ಮಾಲಕರು ಇಂದು ಬೆಳಿಗ್ಗೆ ಶೋರೂಂನ ಬಾಗಿಲು ತೆರೆಯಲು ಬಂದ ವೇಳೆ ಈ ಅನಾಹುತವಾಗಿದ್ದು, ಬಾಗಿಲು ತೆರೆಯುತ್ತಿದ್ದಂತೆ ಮತ್ತೆ ಭಾರೀ ಬೆಂಕಿ , ಹೊಗೆ ಆವರಿಸಿದೆ.

ಸ್ಥಳೀಯರು ಕೂಡಲೇ ಅಗ್ನಿ ಶಾಮಕ ಠಾಣೆಗೆ ಕರೆ ಮಾಡಿ ತಿಳಿಸಿದ್ದಾರೆ. ಈ ಮೂಲಕ ಹೆಚ್ಚಿನ ಹಾನಿಯನ್ನು ತಪ್ಪಿಸಿದ್ದಾರೆ. ಪಾಂಡೇಶ್ವರ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು