2:53 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಬೆಂದೂರುವೆಲ್ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಆಕಸ್ಮಿಕ: ಅಪಾರ ಹಾನಿ;   ದುರಂತಕ್ಕೆ ಏನು ಕಾರಣ?

10/01/2022, 11:39

ಮಂಗಳೂರು(reporterkarnataka.com): ನಗರದ ಬೆಂದೂರುವೆಲ್‌ ನ ಪ್ಯಾರಾಮೌಂಟ್ ಕಟ್ಟಡದಲ್ಲಿರುವ ಎಲ್‌ಜಿ ಶೋ ರೂಂನಲ್ಲಿ ಅಗ್ನಿ ಆಕಸ್ಮಿಕವಾಗಿ ಸಂಭವಿಸಿದ್ದು, ಅಪಾರ ನಷ್ಟ ಸಂಭವಿಸಿದೆ.

ಇಲ್ಲಿ ಅಕ್ಕಪಕ್ಕದಲ್ಲಿ ಹಲವು ಕಟ್ಟಡಗಳಿದ್ದು, ಅಗ್ನಿ ಆಕಸ್ಮಿಕದಿಂದಾಗಿ ಅವರು ಆತಂಕವನ್ನು ಎದುರಿಸಬೇಕಾಯಿತು. ಬೆಂಕಿ ಹಿಡಿಯಲು ಶಾರ್ಟ್‌ ಸರ್ಕ್ಯೂಟ್‌ ಕಾರಣ ಎಂದು ಹೇಳಲಾಗಿದೆ. 

ಗಣೇಶ್ ಪ್ರಭು ಮಾಲಕತ್ವದ ಭುವನೇಂದ್ರ ಎಂಟರ್‌ ಪ್ರೈಸಸ್‌ನ ಎಲ್‌ ಶೋರೂಂ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಅಪಾರ ಮೌಲ್ಯದ ವಿದ್ಯುತ್ ಪರಿಕರಗಳು ಸೇರಿದಂತೆ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ.

ಅಂಗಡಿ ಮಾಲಕರು ಇಂದು ಬೆಳಿಗ್ಗೆ ಶೋರೂಂನ ಬಾಗಿಲು ತೆರೆಯಲು ಬಂದ ವೇಳೆ ಈ ಅನಾಹುತವಾಗಿದ್ದು, ಬಾಗಿಲು ತೆರೆಯುತ್ತಿದ್ದಂತೆ ಮತ್ತೆ ಭಾರೀ ಬೆಂಕಿ , ಹೊಗೆ ಆವರಿಸಿದೆ.

ಸ್ಥಳೀಯರು ಕೂಡಲೇ ಅಗ್ನಿ ಶಾಮಕ ಠಾಣೆಗೆ ಕರೆ ಮಾಡಿ ತಿಳಿಸಿದ್ದಾರೆ. ಈ ಮೂಲಕ ಹೆಚ್ಚಿನ ಹಾನಿಯನ್ನು ತಪ್ಪಿಸಿದ್ದಾರೆ. ಪಾಂಡೇಶ್ವರ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು