3:36 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಹೇಯ ಕೃತ್ಯ: ಮಗನಿಗೆ ಬೆಂಕಿ ಹಚ್ಚಿ ಕೊಂದ ಪಾಪಿ ತಂದೆ; ಕಾರಣ ಏನು ಗೊತ್ತೇ?

07/04/2022, 21:18

ಬೆಂಗಳೂರು(reporterkarnataka.com): 12 ಸಾವಿರ ರೂಪಾಯಿ ಹಣ ಕಳೆದುಕೊಂಡಿದ್ದಾನೆ ಎಂದು ಹಾಡಹಗಲೇ ತಂದೆಯೇ ಮಗನನ್ನು ಬೆಂಕಿ ಹಚ್ಚಿ ಕೊಂದ ಅಮಾನವೀಯ ಘಟನೆ ಬೆಂಗಳೂರಿನ ಅಜಾದ್ ನಗರದಲ್ಲಿ ನಡೆದಿದೆ.

ಕಳೆದ ವಾರ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅರ್ಪಿತ್ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಸುಟ್ಟ ಗಾಯಗಳಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಅರ್ಪಿತ್ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಮಗನ ಮೇಲೆ ತಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವ್ಯವಹಾರದ ವಿಷಯ ಸಂಬಂಧ ಅಪ್ಪ ಮಗನ ನಡುವೆ ಸಣ್ಣ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಕುಪಿತಗೊಂಡ ಅಪ್ಪ ಸುರೇಂದ್ರ ಮಗ ಅರ್ಪಿತ್ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈದಿದ್ದಾನೆ ಎಂದು ಆರೋಪಿಸಲಾಗಿದೆ.

ಕೂಡಲೇ ಪರಿಚಯಸ್ಥರು ಅರ್ಪಿತ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಪೊಲೀಸರ ಮುಂದೆ ಅರ್ಪಿತ್ ಹೇಳಿಕೆ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತೀವ್ರ ವಿಚಾರಣೆ ನಡೆಸಿದ ಚಾಮರಾಜಪೇಟೆ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು