11:46 PM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಬೆಂಗಳೂರಿಗೆ ನ್ಯೂಲುಕ್; ಗೋಡೆಗಳ ಮೇಲೆ ಕಲಾವಿದರ ಕೈಚಳಕ; ಹಲವು ಕತೆ ಹೇಳುತ್ತಿರುವ ಚಿತ್ರಪಟಗಳು

15/01/2025, 19:03

ಬೆಂಗಳೂರು(reporterkarnataka.com): ಬೆಂಗಳೂರಿನ 10 ಗೋಡೆಗಳ ಮೇಲೆ ಪ್ರಸಿದ್ಧ ಕಲಾವಿದರಿಂದ ಚಿತ್ತಾರ ಮೂಡಿಸುವ ಕೆಲಸ ಪೂರ್ಣಗೊಂಡಿದೆ.
ಬಿಎಂಆರ್‌ಸಿಎಲ್‌ ಹಾಗೂ ಅನ್‌ಬಾಕ್ಸಿಂಗ್‌ ಬಿಎಲ್‌ಆರ್‌ ಸಹಯೋಗದೊಂದಿಗೆ ನಗರದ ಪ್ರಮುಖ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ “ಗೋಡೆ ಬೆಂಗಳೂರು” ಉಪಕ್ರಮವನ್ನು ಈ ಹಿಂದೆ ಘೋಷಿಸಲಾಗಿತ್ತು. ಇದೀಗ ಚಿತ್ರಬಿಡುಸವ ಕೆಲಸ ಪೂರ್ಣಗೊಂಡಿದ್ದು, ಬೆಂಗಳೂರಿನ ಈ 10 ಗೋಡೆಗಳು ಸುಂದರವಾಗಿ ಮೂಡಿ ಬಂದಿವೆ.
*ಎಲ್ಲೆಲ್ಲಿ ಚಿತ್ರ:*
ವಿಶ್ವೇಶ್ವರಯ್ಯ ಸೆಂಟ್ರಲ್‌ ಕಾಲೇಜ್‌ ಮೆಟ್ರೋ ಸ್ಟೇಷನ್‌ನ ಗೋಡೆಯ ಮೇಲೆ, “ಸ್ವಲ್ಪ ಅಡ್ಜೆಸ್ಟ್‌ ಮಾಡ್ಕೊಳಿ” ಎಂಬ ಶೀರ್ಷಿಕೆಯಡಿ ಬೆಂಗಳೂರಿನ ಜನದಟ್ಟಣೆಯ ಬಗ್ಗೆ ಕಲಾವಿದರಾದ ಅನಿಲ್‌ಕುಮಾರ್‌ ಸುಂದರವಾಗಿ ಚಿತ್ರಬಿಡಿಸಿದ್ದಾರೆ.


ಚರ್ಚ್‌ಸ್ಟ್ರೀಟ್‌ ನಲ್ಲಿರುವ ಗೋಡೆ ಒಂದರ ಮೇಲೆ, ಬಿಡುವಿನ ಸಮಯದಲ್ಲಿ ನಿಮ್ಮೊಂದಿಗೆ ಕಳೆಯಿರಿ ಎಂಬ ಸಂದೇಶ ಸಾರುವ ಚಿತ್ರವನ್ನು ಮನಸೋರೆಗೊಳ್ಳುವಂತೆ ಕಲಾವಿದರಾದ ಅನ್ಪು ವರ್ಕಿ ಅವರು ತಮ್ಮ ಕೈಚಳಕ ತೋರಿಸಿದ್ದಾರೆ. ಇನ್ನು, ಬೆಂಗಳೂರಿನ ವಲಸೆ ಬರುವ ಸಾವಿರಾರು ಜನ ಇಲ್ಲಿ ಬದುಕಲು ನಡೆಸುವ ಜಿದ್ದಾಜಿದ್ದಿನ ಕಷ್ಟವನ್ನು ವಿವರಿಸುವಂತೆ ಒಬ್ಬ ವ್ಯಕ್ತಿ ಸಿಲೆಂಡರ್‌ ಮೇಲೆ ಮಲಗಿರುವ ಚಿತ್ರದ ಮೂಲಕ ಹೇಳಲಾಗಿದೆ. ಜೆ.ಪಿ.ನಗರದ ಮೆಟ್ರೋ ನಿಲ್ದಾಣದಲಿ ವಿಂಡೋಸ್ ಟು ದಿ ಸೋಲ್ ಶೀರ್ಷಿಕೆಯಲ್ಲಿ ಚಿತ್ರ ಬಿಡಿಸಲಾಗಿದ್ದು, ಮಹಿಳೆಯೊಬ್ಬರ ಕಣ್ಣುಗಳ ಚಿತ್ರ ಇದಾಗಿದೆ. ಜಯನಗರ ಮೆಟ್ರೋ ನಿಲ್ದಾಣದ ಗೋಡೆ ಮೇಲೆ ಈ ಹಿಂದೆ ಇದ್ದ ಬೆಂಗಳೂರಿನ ನೈಜತೆಯ ಬಗ್ಗೆ ಚಿತ್ರಿಸಲಾಗಿದೆ, ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದಲ್ಲಿ ಹಳೆಯ ವಿಂಟೇಜ್ ಪೋಸ್ಟರ್‌ಗಳು ಮತ್ತು ಮ್ಯಾಚ್‌ಬಾಕ್ಸ್ ಚಿತ್ರಗಳಿಂದ ಪ್ರೇರಿತವಾದ ಕಲಾಕೃತಿಯನ್ನು ಬಿಡಿಸಲಾಗಿದೆ. ಸೈನ್ಸ್‌ ಗ್ಯಾಲರಿ ರಸ್ತೆಯ ಗೋಡೆಗಳ ಮೇಲೆ ರಂಗೋಲಿ ಚಿತ್ತಾರ, ಯಶವಂತಪುರ ಮೆಟ್ರೋಸ್ಟೇಷನ್‌ನಲ್ಲಿ ದೇಹದ ಭಾಗಗಳ ಕುರಿತು ವಿವರಿಸುವ ಚಿತ್ರ, ಹಲಸೂರು ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೊಬ್ಬರು ತಳ್ಳೋಗಾಡಿ ತಳ್ಳುವ ಸಾಗುವ ಚಿತ್ರವನ್ನು ಬಿಡಿಸಲಾಗಿದೆ. ಒಟ್ಟಾರೆ 10 ಗೋಡೆಗಳ ಮೇಲೆ ವಿವಿಧ ವಿಷಯಗಳನ್ನಾಧರಿಸಿ, ಬೃಹತ್‌ ಗಾತ್ರದಲ್ಲಿ ಚಿತ್ರ ಬಿಡಿಸಿದ್ದು, ಈ ಚಿತ್ರಗಳು ನಗರದ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಿವೆ,

ಇತ್ತೀಚಿನ ಸುದ್ದಿ

ಜಾಹೀರಾತು