4:53 PM Saturday27 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಬೆಂಗಳೂರಿಗೆ ನ್ಯೂಲುಕ್; ಗೋಡೆಗಳ ಮೇಲೆ ಕಲಾವಿದರ ಕೈಚಳಕ; ಹಲವು ಕತೆ ಹೇಳುತ್ತಿರುವ ಚಿತ್ರಪಟಗಳು

15/01/2025, 19:03

ಬೆಂಗಳೂರು(reporterkarnataka.com): ಬೆಂಗಳೂರಿನ 10 ಗೋಡೆಗಳ ಮೇಲೆ ಪ್ರಸಿದ್ಧ ಕಲಾವಿದರಿಂದ ಚಿತ್ತಾರ ಮೂಡಿಸುವ ಕೆಲಸ ಪೂರ್ಣಗೊಂಡಿದೆ.
ಬಿಎಂಆರ್‌ಸಿಎಲ್‌ ಹಾಗೂ ಅನ್‌ಬಾಕ್ಸಿಂಗ್‌ ಬಿಎಲ್‌ಆರ್‌ ಸಹಯೋಗದೊಂದಿಗೆ ನಗರದ ಪ್ರಮುಖ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ “ಗೋಡೆ ಬೆಂಗಳೂರು” ಉಪಕ್ರಮವನ್ನು ಈ ಹಿಂದೆ ಘೋಷಿಸಲಾಗಿತ್ತು. ಇದೀಗ ಚಿತ್ರಬಿಡುಸವ ಕೆಲಸ ಪೂರ್ಣಗೊಂಡಿದ್ದು, ಬೆಂಗಳೂರಿನ ಈ 10 ಗೋಡೆಗಳು ಸುಂದರವಾಗಿ ಮೂಡಿ ಬಂದಿವೆ.
*ಎಲ್ಲೆಲ್ಲಿ ಚಿತ್ರ:*
ವಿಶ್ವೇಶ್ವರಯ್ಯ ಸೆಂಟ್ರಲ್‌ ಕಾಲೇಜ್‌ ಮೆಟ್ರೋ ಸ್ಟೇಷನ್‌ನ ಗೋಡೆಯ ಮೇಲೆ, “ಸ್ವಲ್ಪ ಅಡ್ಜೆಸ್ಟ್‌ ಮಾಡ್ಕೊಳಿ” ಎಂಬ ಶೀರ್ಷಿಕೆಯಡಿ ಬೆಂಗಳೂರಿನ ಜನದಟ್ಟಣೆಯ ಬಗ್ಗೆ ಕಲಾವಿದರಾದ ಅನಿಲ್‌ಕುಮಾರ್‌ ಸುಂದರವಾಗಿ ಚಿತ್ರಬಿಡಿಸಿದ್ದಾರೆ.


ಚರ್ಚ್‌ಸ್ಟ್ರೀಟ್‌ ನಲ್ಲಿರುವ ಗೋಡೆ ಒಂದರ ಮೇಲೆ, ಬಿಡುವಿನ ಸಮಯದಲ್ಲಿ ನಿಮ್ಮೊಂದಿಗೆ ಕಳೆಯಿರಿ ಎಂಬ ಸಂದೇಶ ಸಾರುವ ಚಿತ್ರವನ್ನು ಮನಸೋರೆಗೊಳ್ಳುವಂತೆ ಕಲಾವಿದರಾದ ಅನ್ಪು ವರ್ಕಿ ಅವರು ತಮ್ಮ ಕೈಚಳಕ ತೋರಿಸಿದ್ದಾರೆ. ಇನ್ನು, ಬೆಂಗಳೂರಿನ ವಲಸೆ ಬರುವ ಸಾವಿರಾರು ಜನ ಇಲ್ಲಿ ಬದುಕಲು ನಡೆಸುವ ಜಿದ್ದಾಜಿದ್ದಿನ ಕಷ್ಟವನ್ನು ವಿವರಿಸುವಂತೆ ಒಬ್ಬ ವ್ಯಕ್ತಿ ಸಿಲೆಂಡರ್‌ ಮೇಲೆ ಮಲಗಿರುವ ಚಿತ್ರದ ಮೂಲಕ ಹೇಳಲಾಗಿದೆ. ಜೆ.ಪಿ.ನಗರದ ಮೆಟ್ರೋ ನಿಲ್ದಾಣದಲಿ ವಿಂಡೋಸ್ ಟು ದಿ ಸೋಲ್ ಶೀರ್ಷಿಕೆಯಲ್ಲಿ ಚಿತ್ರ ಬಿಡಿಸಲಾಗಿದ್ದು, ಮಹಿಳೆಯೊಬ್ಬರ ಕಣ್ಣುಗಳ ಚಿತ್ರ ಇದಾಗಿದೆ. ಜಯನಗರ ಮೆಟ್ರೋ ನಿಲ್ದಾಣದ ಗೋಡೆ ಮೇಲೆ ಈ ಹಿಂದೆ ಇದ್ದ ಬೆಂಗಳೂರಿನ ನೈಜತೆಯ ಬಗ್ಗೆ ಚಿತ್ರಿಸಲಾಗಿದೆ, ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದಲ್ಲಿ ಹಳೆಯ ವಿಂಟೇಜ್ ಪೋಸ್ಟರ್‌ಗಳು ಮತ್ತು ಮ್ಯಾಚ್‌ಬಾಕ್ಸ್ ಚಿತ್ರಗಳಿಂದ ಪ್ರೇರಿತವಾದ ಕಲಾಕೃತಿಯನ್ನು ಬಿಡಿಸಲಾಗಿದೆ. ಸೈನ್ಸ್‌ ಗ್ಯಾಲರಿ ರಸ್ತೆಯ ಗೋಡೆಗಳ ಮೇಲೆ ರಂಗೋಲಿ ಚಿತ್ತಾರ, ಯಶವಂತಪುರ ಮೆಟ್ರೋಸ್ಟೇಷನ್‌ನಲ್ಲಿ ದೇಹದ ಭಾಗಗಳ ಕುರಿತು ವಿವರಿಸುವ ಚಿತ್ರ, ಹಲಸೂರು ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೊಬ್ಬರು ತಳ್ಳೋಗಾಡಿ ತಳ್ಳುವ ಸಾಗುವ ಚಿತ್ರವನ್ನು ಬಿಡಿಸಲಾಗಿದೆ. ಒಟ್ಟಾರೆ 10 ಗೋಡೆಗಳ ಮೇಲೆ ವಿವಿಧ ವಿಷಯಗಳನ್ನಾಧರಿಸಿ, ಬೃಹತ್‌ ಗಾತ್ರದಲ್ಲಿ ಚಿತ್ರ ಬಿಡಿಸಿದ್ದು, ಈ ಚಿತ್ರಗಳು ನಗರದ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಿವೆ,

ಇತ್ತೀಚಿನ ಸುದ್ದಿ

ಜಾಹೀರಾತು