7:05 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಮಹಾಶಿವರಾತ್ರಿ ಮಹೋತ್ಸವ: 66 ದೇಶಗಳಿಂದ ಬಂದ ಭಕ್ತರ ದಂಡು

20/02/2023, 11:23

ಬೆಂಗಳೂರು(reporterkarnataka.com): ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ನ ಅಂತಾರಾಷ್ಟ್ರೀಯ ಕೇಂದ್ರದಲ್ಲಿ 66 ದೇಶಗಳಿಂದ ಬಂದ ಭಕ್ತರು ಮಹಾಶಿವರಾತ್ರಿಯ ಮಹೋತ್ಸವದಲ್ಲಿ ಪಾಲ್ಗೊಂಡರು. ಜಾಗತಿಕ ಮಾನವತಾವಾದಿಗಳಾದ, ಆಧ್ಯಾತ್ಮಿಕ ಗುರುಗಳಾದ ಗುರುದೇವ್ ಶ್ರೀ ಶ್ರೀ ರವಿಶಂಕರರ ಸಾನ್ನಿಧ್ಯದಲ್ಲಿ ನಡೆದ ವೈದಿಕ ಮಂತ್ರ ಪಠಣ ಭಜನೆ, ಡೋಲು, ತಾಳ ವಾದ್ಯಗಳ ನಾದ ಮುಗಿಲು ಮುಟ್ಟಿತು.

ಆರ್ಟ್ ಆಫ್ ಲಿವಿಂಗ್ ನ ವೈದಿಕ ಪರಂಪರೆಯ ಶಾಲೆಯಾದ ವೇದ ಆಗಮ ಸಂಸ್ಕೃತ ಮಹಾಪಾಠಶಾಲೆಯ ವೈದಿಕ ಪಂಡಿತರು ನಡೆಸಿಕೊಟ್ಟ ಮಹಾ ರುದ್ರಾಭಿಷೇಕದಿಂದ ವಾತಾವರಣವೆಲ್ಲವೂ ಪವಿತ್ರ ಕಂಪನಗಳಿಂದ ತುಂಬಿತ್ತು.


ಮಹೋತ್ಸವದಲ್ಲಿ ಸಾಂಸ್ಕೃತಿಕ ಪ್ರದರ್ಶನಗಳು ನಡೆಯಿತು. ವಾಣಿಕ ಗುಪ್ತರವರಿಂದ ಮೋಹನ ವೀಣೆ ವಾದನ ನಡೆಯಿತು. ಮಹಾರುದ್ರ ಪೂಜೆಯ ಗುರುದೇವ್ ಶ್ರೀ ಶ್ರೀ ರವಿಶಂಕರರಿಂದ ನಿರ್ದೇಶಿತ ಧ್ಯಾನವನ್ನು ನಡೆಸಿಕೊಡಲಾಯಿತು. ಇದನ್ನು ಸಾವಿರಾರು ಸ್ಥಳಗಳಲ್ಲಿ ಜಾಲತಾಣದ ನೇರಪ್ರಸಾರ ಮಾಡಲಾಯಿತು. ” ಇಂಡಿಯ ಮೆಡಿಟೇಟ್ಸ್” ಚಳುವಳಿಯ ಅಂಗವಾಗಿ ಪ್ರತಿಯೊಂದು ಮನೆಯಲ್ಲೂ, ಉತ್ತಮ ಮಾನಸಿಕ ಆರೋಗ್ಯಕ್ಕಾಗಿ, ಆಂತರಿಕ ಶಾಂತಿಗಾಗಿ ಧ್ಯಾನ ಮಾಡಬೇಕೆಂದು ಗುರುದೇವರು ಪ್ರೋತ್ಸಾಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು