11:49 AM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಬೆಂಗಳೂರಿನ ಸಿಎಂಆರ್ ಯುನಿವರ್ಸಿಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿ, ಬಂಟ್ವಾಳ ಮೂಲದ ರಾಧೇಶ್ ಮಯ್ಯಗೆ ಫ್ರೆಶರ್ ಅವಾರ್ಡ್

01/05/2023, 00:40

ಬೆಂಗಳೂರು(reporterkarnataka.com): ಬೆಂಗಳೂರಿನ ಗ್ರೇಟ್ ಸಿಎಂಆರ್ ಯುನಿವರ್ಸಿಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿ ರಾಧೇಶ್ ಮಯ್ಯ ಅವರು ಕಾಲೇಜಿನ ಫ್ರೆಶರ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
ಕಾಲೇಜಿನಲ್ಲಿ ಕಳೆದ ವಾರ ನಡೆದ 2023ನೇ ಸಾಲಿನ ಫ್ರೆಶರ್ಸ್ ಡೇ ಕಾರ್ಯಕ್ರಮದಲ್ಲಿ ರಾಧೇಶ್ ಮಯ್ಯ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಬೆಂಗಳೂರಿನ 12 ಕಾಲೇಜುಗಳಿಂದ ರೇವಾ ವಿಶ್ವವಿದ್ಯಾಲಯದ ಕಾಲೇಜು ಭಾಗವಹಿಸುವವರಲ್ಲಿ 2ನೇ ಸ್ಥಾನವನ್ನು ಗೆದ್ದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ
ರಾಧೇಶ್ ಮಯ್ಯ ಅವರು ಮಾರ್ಕೆಟಿಂಗ್ ಪ್ರಮೋಶನ್ ಮಾಡುವ ಚಾಲೆಂಜ್ ನಲ್ಲಿ ಕೂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇದರಲ್ಲಿ 12 ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಇದು ಎಂಬಿಎ ವಿದ್ಯಾರ್ಥಿ ಗಳಿಗೆ ಮೀಸಲಾದ ಚಾಲೆಂಜ್ ಆಗಿದೆ. ಇನ್ನು ಫ್ರೆಶರ್ ಅವಾರ್ಡ್ ಕಾಲೇಜಿನಲ್ಲಿ ಹಾಡುಗಾರಿಕೆ, ಕಲಿಕೆ ಇನ್ನಿತರ ಎಲ್ಲಾ ಚಟುವಟಿಕೆಗಳಲ್ಲಿ ಆಯ್ಕೆಯಾದ ಏಕೈಕ ವಿದ್ಯಾರ್ಥಿ ಗೆ ಮೀಸಲಾದ ಅವಾರ್ಡ್ ಆಗಿದೆ. ಅದು ಈ ಬಾರಿ ರಾಧೇಶ್ ಮಯ್ಯ ಅವರ ಪಾಲಾಗಿದೆ.
ರಾಧೇಶ್ ಮಯ್ಯ ಅವರು ನಿವೃತ್ತ ಕಂದಾಯ ಅಧಿಕಾರಿ ಹಾಗೂ ಸಂಗೀತ ವಿದ್ವಾಂಸ ಡಾ. ಎನ್. ಸೋಮಶೇಖರ್ ಮಯ್ಯ ಬಂಟ್ವಾಳ ಹಾಗೂ ಶಿಕ್ಷಕಿ ಶ್ರೀವಾಣಿ ಮಯ್ಯ ಅವರ ಪುತ್ರ. ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಹಳೇ ವಿದ್ಯಾರ್ಥಿ. ಈಗ ಬೆಂಗಳೂರಿನ ಸಿಎಂಆರ್ ಯುನಿವರ್ಸಿಟಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು