10:02 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಬೆಂಗಳೂರಿನ ಸಿಎಂಆರ್ ಯುನಿವರ್ಸಿಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿ, ಬಂಟ್ವಾಳ ಮೂಲದ ರಾಧೇಶ್ ಮಯ್ಯಗೆ ಫ್ರೆಶರ್ ಅವಾರ್ಡ್

01/05/2023, 00:40

ಬೆಂಗಳೂರು(reporterkarnataka.com): ಬೆಂಗಳೂರಿನ ಗ್ರೇಟ್ ಸಿಎಂಆರ್ ಯುನಿವರ್ಸಿಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿ ರಾಧೇಶ್ ಮಯ್ಯ ಅವರು ಕಾಲೇಜಿನ ಫ್ರೆಶರ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
ಕಾಲೇಜಿನಲ್ಲಿ ಕಳೆದ ವಾರ ನಡೆದ 2023ನೇ ಸಾಲಿನ ಫ್ರೆಶರ್ಸ್ ಡೇ ಕಾರ್ಯಕ್ರಮದಲ್ಲಿ ರಾಧೇಶ್ ಮಯ್ಯ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಬೆಂಗಳೂರಿನ 12 ಕಾಲೇಜುಗಳಿಂದ ರೇವಾ ವಿಶ್ವವಿದ್ಯಾಲಯದ ಕಾಲೇಜು ಭಾಗವಹಿಸುವವರಲ್ಲಿ 2ನೇ ಸ್ಥಾನವನ್ನು ಗೆದ್ದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ
ರಾಧೇಶ್ ಮಯ್ಯ ಅವರು ಮಾರ್ಕೆಟಿಂಗ್ ಪ್ರಮೋಶನ್ ಮಾಡುವ ಚಾಲೆಂಜ್ ನಲ್ಲಿ ಕೂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇದರಲ್ಲಿ 12 ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಇದು ಎಂಬಿಎ ವಿದ್ಯಾರ್ಥಿ ಗಳಿಗೆ ಮೀಸಲಾದ ಚಾಲೆಂಜ್ ಆಗಿದೆ. ಇನ್ನು ಫ್ರೆಶರ್ ಅವಾರ್ಡ್ ಕಾಲೇಜಿನಲ್ಲಿ ಹಾಡುಗಾರಿಕೆ, ಕಲಿಕೆ ಇನ್ನಿತರ ಎಲ್ಲಾ ಚಟುವಟಿಕೆಗಳಲ್ಲಿ ಆಯ್ಕೆಯಾದ ಏಕೈಕ ವಿದ್ಯಾರ್ಥಿ ಗೆ ಮೀಸಲಾದ ಅವಾರ್ಡ್ ಆಗಿದೆ. ಅದು ಈ ಬಾರಿ ರಾಧೇಶ್ ಮಯ್ಯ ಅವರ ಪಾಲಾಗಿದೆ.
ರಾಧೇಶ್ ಮಯ್ಯ ಅವರು ನಿವೃತ್ತ ಕಂದಾಯ ಅಧಿಕಾರಿ ಹಾಗೂ ಸಂಗೀತ ವಿದ್ವಾಂಸ ಡಾ. ಎನ್. ಸೋಮಶೇಖರ್ ಮಯ್ಯ ಬಂಟ್ವಾಳ ಹಾಗೂ ಶಿಕ್ಷಕಿ ಶ್ರೀವಾಣಿ ಮಯ್ಯ ಅವರ ಪುತ್ರ. ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಹಳೇ ವಿದ್ಯಾರ್ಥಿ. ಈಗ ಬೆಂಗಳೂರಿನ ಸಿಎಂಆರ್ ಯುನಿವರ್ಸಿಟಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು