4:40 AM Thursday20 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ಬೆಂಗಳೂರಿನ ಸಿಎಂಆರ್ ಯುನಿವರ್ಸಿಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿ, ಬಂಟ್ವಾಳ ಮೂಲದ ರಾಧೇಶ್ ಮಯ್ಯಗೆ ಫ್ರೆಶರ್ ಅವಾರ್ಡ್

01/05/2023, 00:40

ಬೆಂಗಳೂರು(reporterkarnataka.com): ಬೆಂಗಳೂರಿನ ಗ್ರೇಟ್ ಸಿಎಂಆರ್ ಯುನಿವರ್ಸಿಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿ ರಾಧೇಶ್ ಮಯ್ಯ ಅವರು ಕಾಲೇಜಿನ ಫ್ರೆಶರ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
ಕಾಲೇಜಿನಲ್ಲಿ ಕಳೆದ ವಾರ ನಡೆದ 2023ನೇ ಸಾಲಿನ ಫ್ರೆಶರ್ಸ್ ಡೇ ಕಾರ್ಯಕ್ರಮದಲ್ಲಿ ರಾಧೇಶ್ ಮಯ್ಯ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಬೆಂಗಳೂರಿನ 12 ಕಾಲೇಜುಗಳಿಂದ ರೇವಾ ವಿಶ್ವವಿದ್ಯಾಲಯದ ಕಾಲೇಜು ಭಾಗವಹಿಸುವವರಲ್ಲಿ 2ನೇ ಸ್ಥಾನವನ್ನು ಗೆದ್ದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ
ರಾಧೇಶ್ ಮಯ್ಯ ಅವರು ಮಾರ್ಕೆಟಿಂಗ್ ಪ್ರಮೋಶನ್ ಮಾಡುವ ಚಾಲೆಂಜ್ ನಲ್ಲಿ ಕೂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇದರಲ್ಲಿ 12 ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಇದು ಎಂಬಿಎ ವಿದ್ಯಾರ್ಥಿ ಗಳಿಗೆ ಮೀಸಲಾದ ಚಾಲೆಂಜ್ ಆಗಿದೆ. ಇನ್ನು ಫ್ರೆಶರ್ ಅವಾರ್ಡ್ ಕಾಲೇಜಿನಲ್ಲಿ ಹಾಡುಗಾರಿಕೆ, ಕಲಿಕೆ ಇನ್ನಿತರ ಎಲ್ಲಾ ಚಟುವಟಿಕೆಗಳಲ್ಲಿ ಆಯ್ಕೆಯಾದ ಏಕೈಕ ವಿದ್ಯಾರ್ಥಿ ಗೆ ಮೀಸಲಾದ ಅವಾರ್ಡ್ ಆಗಿದೆ. ಅದು ಈ ಬಾರಿ ರಾಧೇಶ್ ಮಯ್ಯ ಅವರ ಪಾಲಾಗಿದೆ.
ರಾಧೇಶ್ ಮಯ್ಯ ಅವರು ನಿವೃತ್ತ ಕಂದಾಯ ಅಧಿಕಾರಿ ಹಾಗೂ ಸಂಗೀತ ವಿದ್ವಾಂಸ ಡಾ. ಎನ್. ಸೋಮಶೇಖರ್ ಮಯ್ಯ ಬಂಟ್ವಾಳ ಹಾಗೂ ಶಿಕ್ಷಕಿ ಶ್ರೀವಾಣಿ ಮಯ್ಯ ಅವರ ಪುತ್ರ. ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಹಳೇ ವಿದ್ಯಾರ್ಥಿ. ಈಗ ಬೆಂಗಳೂರಿನ ಸಿಎಂಆರ್ ಯುನಿವರ್ಸಿಟಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು