2:33 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಬೆಂಗಳೂರಿನ ಸಿಎಂಆರ್ ಯುನಿವರ್ಸಿಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿ, ಬಂಟ್ವಾಳ ಮೂಲದ ರಾಧೇಶ್ ಮಯ್ಯಗೆ ಫ್ರೆಶರ್ ಅವಾರ್ಡ್

01/05/2023, 00:40

ಬೆಂಗಳೂರು(reporterkarnataka.com): ಬೆಂಗಳೂರಿನ ಗ್ರೇಟ್ ಸಿಎಂಆರ್ ಯುನಿವರ್ಸಿಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿ ರಾಧೇಶ್ ಮಯ್ಯ ಅವರು ಕಾಲೇಜಿನ ಫ್ರೆಶರ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
ಕಾಲೇಜಿನಲ್ಲಿ ಕಳೆದ ವಾರ ನಡೆದ 2023ನೇ ಸಾಲಿನ ಫ್ರೆಶರ್ಸ್ ಡೇ ಕಾರ್ಯಕ್ರಮದಲ್ಲಿ ರಾಧೇಶ್ ಮಯ್ಯ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಬೆಂಗಳೂರಿನ 12 ಕಾಲೇಜುಗಳಿಂದ ರೇವಾ ವಿಶ್ವವಿದ್ಯಾಲಯದ ಕಾಲೇಜು ಭಾಗವಹಿಸುವವರಲ್ಲಿ 2ನೇ ಸ್ಥಾನವನ್ನು ಗೆದ್ದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ
ರಾಧೇಶ್ ಮಯ್ಯ ಅವರು ಮಾರ್ಕೆಟಿಂಗ್ ಪ್ರಮೋಶನ್ ಮಾಡುವ ಚಾಲೆಂಜ್ ನಲ್ಲಿ ಕೂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇದರಲ್ಲಿ 12 ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಇದು ಎಂಬಿಎ ವಿದ್ಯಾರ್ಥಿ ಗಳಿಗೆ ಮೀಸಲಾದ ಚಾಲೆಂಜ್ ಆಗಿದೆ. ಇನ್ನು ಫ್ರೆಶರ್ ಅವಾರ್ಡ್ ಕಾಲೇಜಿನಲ್ಲಿ ಹಾಡುಗಾರಿಕೆ, ಕಲಿಕೆ ಇನ್ನಿತರ ಎಲ್ಲಾ ಚಟುವಟಿಕೆಗಳಲ್ಲಿ ಆಯ್ಕೆಯಾದ ಏಕೈಕ ವಿದ್ಯಾರ್ಥಿ ಗೆ ಮೀಸಲಾದ ಅವಾರ್ಡ್ ಆಗಿದೆ. ಅದು ಈ ಬಾರಿ ರಾಧೇಶ್ ಮಯ್ಯ ಅವರ ಪಾಲಾಗಿದೆ.
ರಾಧೇಶ್ ಮಯ್ಯ ಅವರು ನಿವೃತ್ತ ಕಂದಾಯ ಅಧಿಕಾರಿ ಹಾಗೂ ಸಂಗೀತ ವಿದ್ವಾಂಸ ಡಾ. ಎನ್. ಸೋಮಶೇಖರ್ ಮಯ್ಯ ಬಂಟ್ವಾಳ ಹಾಗೂ ಶಿಕ್ಷಕಿ ಶ್ರೀವಾಣಿ ಮಯ್ಯ ಅವರ ಪುತ್ರ. ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಹಳೇ ವಿದ್ಯಾರ್ಥಿ. ಈಗ ಬೆಂಗಳೂರಿನ ಸಿಎಂಆರ್ ಯುನಿವರ್ಸಿಟಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು