2:12 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಬೆಂಗಳೂರಿನ ಸಿಎಂಆರ್ ಯುನಿವರ್ಸಿಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿ, ಬಂಟ್ವಾಳ ಮೂಲದ ರಾಧೇಶ್ ಮಯ್ಯಗೆ ಫ್ರೆಶರ್ ಅವಾರ್ಡ್

01/05/2023, 00:40

ಬೆಂಗಳೂರು(reporterkarnataka.com): ಬೆಂಗಳೂರಿನ ಗ್ರೇಟ್ ಸಿಎಂಆರ್ ಯುನಿವರ್ಸಿಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿ ರಾಧೇಶ್ ಮಯ್ಯ ಅವರು ಕಾಲೇಜಿನ ಫ್ರೆಶರ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
ಕಾಲೇಜಿನಲ್ಲಿ ಕಳೆದ ವಾರ ನಡೆದ 2023ನೇ ಸಾಲಿನ ಫ್ರೆಶರ್ಸ್ ಡೇ ಕಾರ್ಯಕ್ರಮದಲ್ಲಿ ರಾಧೇಶ್ ಮಯ್ಯ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಬೆಂಗಳೂರಿನ 12 ಕಾಲೇಜುಗಳಿಂದ ರೇವಾ ವಿಶ್ವವಿದ್ಯಾಲಯದ ಕಾಲೇಜು ಭಾಗವಹಿಸುವವರಲ್ಲಿ 2ನೇ ಸ್ಥಾನವನ್ನು ಗೆದ್ದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ
ರಾಧೇಶ್ ಮಯ್ಯ ಅವರು ಮಾರ್ಕೆಟಿಂಗ್ ಪ್ರಮೋಶನ್ ಮಾಡುವ ಚಾಲೆಂಜ್ ನಲ್ಲಿ ಕೂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇದರಲ್ಲಿ 12 ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಇದು ಎಂಬಿಎ ವಿದ್ಯಾರ್ಥಿ ಗಳಿಗೆ ಮೀಸಲಾದ ಚಾಲೆಂಜ್ ಆಗಿದೆ. ಇನ್ನು ಫ್ರೆಶರ್ ಅವಾರ್ಡ್ ಕಾಲೇಜಿನಲ್ಲಿ ಹಾಡುಗಾರಿಕೆ, ಕಲಿಕೆ ಇನ್ನಿತರ ಎಲ್ಲಾ ಚಟುವಟಿಕೆಗಳಲ್ಲಿ ಆಯ್ಕೆಯಾದ ಏಕೈಕ ವಿದ್ಯಾರ್ಥಿ ಗೆ ಮೀಸಲಾದ ಅವಾರ್ಡ್ ಆಗಿದೆ. ಅದು ಈ ಬಾರಿ ರಾಧೇಶ್ ಮಯ್ಯ ಅವರ ಪಾಲಾಗಿದೆ.
ರಾಧೇಶ್ ಮಯ್ಯ ಅವರು ನಿವೃತ್ತ ಕಂದಾಯ ಅಧಿಕಾರಿ ಹಾಗೂ ಸಂಗೀತ ವಿದ್ವಾಂಸ ಡಾ. ಎನ್. ಸೋಮಶೇಖರ್ ಮಯ್ಯ ಬಂಟ್ವಾಳ ಹಾಗೂ ಶಿಕ್ಷಕಿ ಶ್ರೀವಾಣಿ ಮಯ್ಯ ಅವರ ಪುತ್ರ. ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಹಳೇ ವಿದ್ಯಾರ್ಥಿ. ಈಗ ಬೆಂಗಳೂರಿನ ಸಿಎಂಆರ್ ಯುನಿವರ್ಸಿಟಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು