11:03 AM Thursday6 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಬೆಂಗಳೂರಿನ ಇಂದಿರಾನಗರ 100 ಅಡಿ ರಸ್ತೆ ಅವ್ಯವಸ್ಥೆ: ‘ಕೂ’ ನಲ್ಲಿ ಜನರ ಭಾರೀ ಆಕ್ರೋಶ

22/10/2021, 20:22

ಬೆಂಗಳೂರು(reporterkarnataka.com): ರಾಜ್ಯ ರಾಜಧಾನಿ ಬೆಂಗಳೂರಿನ ಐಷಾರಾಮಿ ಪ್ರದೇಶಗಳಲ್ಲಿ ಒಂದು ಎಂದೇ ಕರೆಸಿಕೊಳ್ಳುವ ಇಂದಿರಾನಗರದ 100 ಅಡಿ ರಸ್ತೆ ಗುಂಡಿಗಳಿಂದನೇ ತುಂಬಿ ಹೋಗಿದ್ದು, ಅವ್ಯವಸ್ಥೆಯ ಆಗರವಾಗಿದೆ.  

ಇಂದಿರಾ ನಗರ ನೂರು (100) ಅಡಿ ರಸ್ತೆ, ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆ ಜೊತೆ ಹಳೆ ಮದ್ರಾಸ್ ರಸ್ತೆ ಸಂಪರ್ಕಿಸುತ್ತದೆ. ಒಂದು ಕೊನೆಯಲ್ಲಿ ಮಧ್ಯಂತರ ವರ್ತುಲ ರಸ್ತೆ ಫ್ಲೈಓವರ್ ಜಂಕ್ಷನ್ (ದೊಮ್ಮಲೂರು ಜಂ‍ಕ್ಷನ್), ಮತ್ತೊಂದು ಕೊನೆಯಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆ ಇದೆ. ಕಳೆದ ಕೆಲವು ವರ್ಷಗಳಿಂದ 100 ಅಡಿ ರಸ್ತೆ ಬೆಂಗಳೂರು ವಾಣಿಜ್ಯಿಕವಾಗಿ ಪ್ರಮುಖ ಉನ್ನತ ರಸ್ತೆಗಳ ಆಗಿ ಮಾರ್ಪಟ್ಟಿದೆ.

ರಸ್ತೆಯ ಕೆಟ್ಟ ಪರಿಸ್ಥಿತಿ ಬಗ್ಗೆ ಸಾರ್ವಜನಿಕರು ಕೂ ಮಾಡಿದ್ದೂ, ದಿನ ಬೆಳಿಗ್ಗೆ ಈ ರಸ್ತೆಯಲ್ಲಿ ಕಚೇರಿಗೆ ಹೋಗುವುದೆಂದರೆ ಯಮ ಯಾತನೆ ಎಂದು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. 


‘ಐಟಿ ಕಂಪೆನಿಗಳೇ ಸಾಲು ಸಾಲು ಚಕ್ಕಳ ಮಕ್ಕಳ ಹಾಕಿ ಕೂತಂತಿರುವ ಇಂದಿರಾನಗರದ ರೋಡು ಮೈಕೈ ತೂತು ಮಾಡಿಕೊಂಡು ಸೊರಗಿ ಸತ್ತು ಹೋಗಿದೆ.. ಅದರ ಅವಸ್ಥೆ ನೋಡಿದರೆ ಆ ರೋಡಿಗೆ ಜನ್ಮವಿತ್ತವರ ಮುಖ ನೋಡ್ಬೇಕಲ್ಲ ಅನ್ಸತ್ತೆ, ಅದನ್ನ ಏನಾದ್ರು ಮಾಡ್ರಿ ರೀ ಶ್ರೀಮಾನ್ ಬೆಂಗಳೂರನವ್ರೆ! ಪಾಪ ಕೆಂಪೇಗೌಡ್ರು!’ ಎಂದು ಸುನಿಲ್ ಎನ್ನುವವರು ಕೂ ಮಾಡಿದ್ದಾರೆ. 

* ‘ಕಷ್ಟಕಷ್ಟ. .ಬೆಂಗಳೂರಿನ ಇಂದಿರಾನಗರದ ೧೦೦ ಅಡಿ ವರ್ತುಲ ರಸ್ತೆಯಲ್ಲಿ ಪ್ರಯಾಣ ದೇವರಿಗೂ ಬೇಡ.  ಬಿಬಿಎಂಪಿ ರಸ್ತೆ ರಿಪೇರಿ ಮಾಡೋದಾದ್ರೂ ಯಾವಾಗ?’ ಎಂದು ಆಕ್ರೋಶ ವ್ಯಕ್ತಪಡಿಸ್ದದರೆ ಗಣೇಶ್ 

* ‘ಇಂದಿರಾ ನಗರದ 100 ಅಡಿ ವರ್ತುಲ ರಸ್ತೆಯಲ್ಲಿ ಸಾಗುವುದು ಜೀವ ಪಣಕ್ಕಿಟ್ಟು ನಡೆಸುವ ಯಾವುದೇ ಸಾಹಸಮಯ ಪ್ರದರ್ಶನ ನೀಡುವ ಸ್ಟಂಟ್ ಗಳಿಗೆ ಹೋಲಿಸಿದರೆ ಅದಕ್ಕಿಂತ ಕಡಿಮೆ ಅನುಭವನ್ನಂತೂ ನೀಡಲಾರದು. ನೀವೂ ಈ ಮಾರ್ಗದಲ್ಲಿ ಸಂಚರಿಸಿದ್ದರೆ ನಿಮ್ಮ ಅನಿಸಿಕೆ ಏನು?’ ಎಂದು ನರೇಶ್ ಕೂ ಮಾಡಿದ್ದಾರೆ.  

ಇತ್ತೀಚಿನ ಸುದ್ದಿ

ಜಾಹೀರಾತು