3:49 AM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಬೆಂಗಳೂರಿನ ಇಂದಿರಾನಗರ 100 ಅಡಿ ರಸ್ತೆ ಅವ್ಯವಸ್ಥೆ: ‘ಕೂ’ ನಲ್ಲಿ ಜನರ ಭಾರೀ ಆಕ್ರೋಶ

22/10/2021, 20:22

ಬೆಂಗಳೂರು(reporterkarnataka.com): ರಾಜ್ಯ ರಾಜಧಾನಿ ಬೆಂಗಳೂರಿನ ಐಷಾರಾಮಿ ಪ್ರದೇಶಗಳಲ್ಲಿ ಒಂದು ಎಂದೇ ಕರೆಸಿಕೊಳ್ಳುವ ಇಂದಿರಾನಗರದ 100 ಅಡಿ ರಸ್ತೆ ಗುಂಡಿಗಳಿಂದನೇ ತುಂಬಿ ಹೋಗಿದ್ದು, ಅವ್ಯವಸ್ಥೆಯ ಆಗರವಾಗಿದೆ.  

ಇಂದಿರಾ ನಗರ ನೂರು (100) ಅಡಿ ರಸ್ತೆ, ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆ ಜೊತೆ ಹಳೆ ಮದ್ರಾಸ್ ರಸ್ತೆ ಸಂಪರ್ಕಿಸುತ್ತದೆ. ಒಂದು ಕೊನೆಯಲ್ಲಿ ಮಧ್ಯಂತರ ವರ್ತುಲ ರಸ್ತೆ ಫ್ಲೈಓವರ್ ಜಂಕ್ಷನ್ (ದೊಮ್ಮಲೂರು ಜಂ‍ಕ್ಷನ್), ಮತ್ತೊಂದು ಕೊನೆಯಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆ ಇದೆ. ಕಳೆದ ಕೆಲವು ವರ್ಷಗಳಿಂದ 100 ಅಡಿ ರಸ್ತೆ ಬೆಂಗಳೂರು ವಾಣಿಜ್ಯಿಕವಾಗಿ ಪ್ರಮುಖ ಉನ್ನತ ರಸ್ತೆಗಳ ಆಗಿ ಮಾರ್ಪಟ್ಟಿದೆ.

ರಸ್ತೆಯ ಕೆಟ್ಟ ಪರಿಸ್ಥಿತಿ ಬಗ್ಗೆ ಸಾರ್ವಜನಿಕರು ಕೂ ಮಾಡಿದ್ದೂ, ದಿನ ಬೆಳಿಗ್ಗೆ ಈ ರಸ್ತೆಯಲ್ಲಿ ಕಚೇರಿಗೆ ಹೋಗುವುದೆಂದರೆ ಯಮ ಯಾತನೆ ಎಂದು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. 


‘ಐಟಿ ಕಂಪೆನಿಗಳೇ ಸಾಲು ಸಾಲು ಚಕ್ಕಳ ಮಕ್ಕಳ ಹಾಕಿ ಕೂತಂತಿರುವ ಇಂದಿರಾನಗರದ ರೋಡು ಮೈಕೈ ತೂತು ಮಾಡಿಕೊಂಡು ಸೊರಗಿ ಸತ್ತು ಹೋಗಿದೆ.. ಅದರ ಅವಸ್ಥೆ ನೋಡಿದರೆ ಆ ರೋಡಿಗೆ ಜನ್ಮವಿತ್ತವರ ಮುಖ ನೋಡ್ಬೇಕಲ್ಲ ಅನ್ಸತ್ತೆ, ಅದನ್ನ ಏನಾದ್ರು ಮಾಡ್ರಿ ರೀ ಶ್ರೀಮಾನ್ ಬೆಂಗಳೂರನವ್ರೆ! ಪಾಪ ಕೆಂಪೇಗೌಡ್ರು!’ ಎಂದು ಸುನಿಲ್ ಎನ್ನುವವರು ಕೂ ಮಾಡಿದ್ದಾರೆ. 

* ‘ಕಷ್ಟಕಷ್ಟ. .ಬೆಂಗಳೂರಿನ ಇಂದಿರಾನಗರದ ೧೦೦ ಅಡಿ ವರ್ತುಲ ರಸ್ತೆಯಲ್ಲಿ ಪ್ರಯಾಣ ದೇವರಿಗೂ ಬೇಡ.  ಬಿಬಿಎಂಪಿ ರಸ್ತೆ ರಿಪೇರಿ ಮಾಡೋದಾದ್ರೂ ಯಾವಾಗ?’ ಎಂದು ಆಕ್ರೋಶ ವ್ಯಕ್ತಪಡಿಸ್ದದರೆ ಗಣೇಶ್ 

* ‘ಇಂದಿರಾ ನಗರದ 100 ಅಡಿ ವರ್ತುಲ ರಸ್ತೆಯಲ್ಲಿ ಸಾಗುವುದು ಜೀವ ಪಣಕ್ಕಿಟ್ಟು ನಡೆಸುವ ಯಾವುದೇ ಸಾಹಸಮಯ ಪ್ರದರ್ಶನ ನೀಡುವ ಸ್ಟಂಟ್ ಗಳಿಗೆ ಹೋಲಿಸಿದರೆ ಅದಕ್ಕಿಂತ ಕಡಿಮೆ ಅನುಭವನ್ನಂತೂ ನೀಡಲಾರದು. ನೀವೂ ಈ ಮಾರ್ಗದಲ್ಲಿ ಸಂಚರಿಸಿದ್ದರೆ ನಿಮ್ಮ ಅನಿಸಿಕೆ ಏನು?’ ಎಂದು ನರೇಶ್ ಕೂ ಮಾಡಿದ್ದಾರೆ.  

ಇತ್ತೀಚಿನ ಸುದ್ದಿ

ಜಾಹೀರಾತು