10:16 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಬೆಂಗಳೂರಿನ ಇಂದಿರಾನಗರ 100 ಅಡಿ ರಸ್ತೆ ಅವ್ಯವಸ್ಥೆ: ‘ಕೂ’ ನಲ್ಲಿ ಜನರ ಭಾರೀ ಆಕ್ರೋಶ

22/10/2021, 20:22

ಬೆಂಗಳೂರು(reporterkarnataka.com): ರಾಜ್ಯ ರಾಜಧಾನಿ ಬೆಂಗಳೂರಿನ ಐಷಾರಾಮಿ ಪ್ರದೇಶಗಳಲ್ಲಿ ಒಂದು ಎಂದೇ ಕರೆಸಿಕೊಳ್ಳುವ ಇಂದಿರಾನಗರದ 100 ಅಡಿ ರಸ್ತೆ ಗುಂಡಿಗಳಿಂದನೇ ತುಂಬಿ ಹೋಗಿದ್ದು, ಅವ್ಯವಸ್ಥೆಯ ಆಗರವಾಗಿದೆ.  

ಇಂದಿರಾ ನಗರ ನೂರು (100) ಅಡಿ ರಸ್ತೆ, ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆ ಜೊತೆ ಹಳೆ ಮದ್ರಾಸ್ ರಸ್ತೆ ಸಂಪರ್ಕಿಸುತ್ತದೆ. ಒಂದು ಕೊನೆಯಲ್ಲಿ ಮಧ್ಯಂತರ ವರ್ತುಲ ರಸ್ತೆ ಫ್ಲೈಓವರ್ ಜಂಕ್ಷನ್ (ದೊಮ್ಮಲೂರು ಜಂ‍ಕ್ಷನ್), ಮತ್ತೊಂದು ಕೊನೆಯಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆ ಇದೆ. ಕಳೆದ ಕೆಲವು ವರ್ಷಗಳಿಂದ 100 ಅಡಿ ರಸ್ತೆ ಬೆಂಗಳೂರು ವಾಣಿಜ್ಯಿಕವಾಗಿ ಪ್ರಮುಖ ಉನ್ನತ ರಸ್ತೆಗಳ ಆಗಿ ಮಾರ್ಪಟ್ಟಿದೆ.

ರಸ್ತೆಯ ಕೆಟ್ಟ ಪರಿಸ್ಥಿತಿ ಬಗ್ಗೆ ಸಾರ್ವಜನಿಕರು ಕೂ ಮಾಡಿದ್ದೂ, ದಿನ ಬೆಳಿಗ್ಗೆ ಈ ರಸ್ತೆಯಲ್ಲಿ ಕಚೇರಿಗೆ ಹೋಗುವುದೆಂದರೆ ಯಮ ಯಾತನೆ ಎಂದು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. 


‘ಐಟಿ ಕಂಪೆನಿಗಳೇ ಸಾಲು ಸಾಲು ಚಕ್ಕಳ ಮಕ್ಕಳ ಹಾಕಿ ಕೂತಂತಿರುವ ಇಂದಿರಾನಗರದ ರೋಡು ಮೈಕೈ ತೂತು ಮಾಡಿಕೊಂಡು ಸೊರಗಿ ಸತ್ತು ಹೋಗಿದೆ.. ಅದರ ಅವಸ್ಥೆ ನೋಡಿದರೆ ಆ ರೋಡಿಗೆ ಜನ್ಮವಿತ್ತವರ ಮುಖ ನೋಡ್ಬೇಕಲ್ಲ ಅನ್ಸತ್ತೆ, ಅದನ್ನ ಏನಾದ್ರು ಮಾಡ್ರಿ ರೀ ಶ್ರೀಮಾನ್ ಬೆಂಗಳೂರನವ್ರೆ! ಪಾಪ ಕೆಂಪೇಗೌಡ್ರು!’ ಎಂದು ಸುನಿಲ್ ಎನ್ನುವವರು ಕೂ ಮಾಡಿದ್ದಾರೆ. 

* ‘ಕಷ್ಟಕಷ್ಟ. .ಬೆಂಗಳೂರಿನ ಇಂದಿರಾನಗರದ ೧೦೦ ಅಡಿ ವರ್ತುಲ ರಸ್ತೆಯಲ್ಲಿ ಪ್ರಯಾಣ ದೇವರಿಗೂ ಬೇಡ.  ಬಿಬಿಎಂಪಿ ರಸ್ತೆ ರಿಪೇರಿ ಮಾಡೋದಾದ್ರೂ ಯಾವಾಗ?’ ಎಂದು ಆಕ್ರೋಶ ವ್ಯಕ್ತಪಡಿಸ್ದದರೆ ಗಣೇಶ್ 

* ‘ಇಂದಿರಾ ನಗರದ 100 ಅಡಿ ವರ್ತುಲ ರಸ್ತೆಯಲ್ಲಿ ಸಾಗುವುದು ಜೀವ ಪಣಕ್ಕಿಟ್ಟು ನಡೆಸುವ ಯಾವುದೇ ಸಾಹಸಮಯ ಪ್ರದರ್ಶನ ನೀಡುವ ಸ್ಟಂಟ್ ಗಳಿಗೆ ಹೋಲಿಸಿದರೆ ಅದಕ್ಕಿಂತ ಕಡಿಮೆ ಅನುಭವನ್ನಂತೂ ನೀಡಲಾರದು. ನೀವೂ ಈ ಮಾರ್ಗದಲ್ಲಿ ಸಂಚರಿಸಿದ್ದರೆ ನಿಮ್ಮ ಅನಿಸಿಕೆ ಏನು?’ ಎಂದು ನರೇಶ್ ಕೂ ಮಾಡಿದ್ದಾರೆ.  

ಇತ್ತೀಚಿನ ಸುದ್ದಿ

ಜಾಹೀರಾತು