4:24 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಬೆಂಗಳೂರಿನ ಇಂದಿರಾನಗರ 100 ಅಡಿ ರಸ್ತೆ ಅವ್ಯವಸ್ಥೆ: ‘ಕೂ’ ನಲ್ಲಿ ಜನರ ಭಾರೀ ಆಕ್ರೋಶ

22/10/2021, 20:22

ಬೆಂಗಳೂರು(reporterkarnataka.com): ರಾಜ್ಯ ರಾಜಧಾನಿ ಬೆಂಗಳೂರಿನ ಐಷಾರಾಮಿ ಪ್ರದೇಶಗಳಲ್ಲಿ ಒಂದು ಎಂದೇ ಕರೆಸಿಕೊಳ್ಳುವ ಇಂದಿರಾನಗರದ 100 ಅಡಿ ರಸ್ತೆ ಗುಂಡಿಗಳಿಂದನೇ ತುಂಬಿ ಹೋಗಿದ್ದು, ಅವ್ಯವಸ್ಥೆಯ ಆಗರವಾಗಿದೆ.  

ಇಂದಿರಾ ನಗರ ನೂರು (100) ಅಡಿ ರಸ್ತೆ, ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆ ಜೊತೆ ಹಳೆ ಮದ್ರಾಸ್ ರಸ್ತೆ ಸಂಪರ್ಕಿಸುತ್ತದೆ. ಒಂದು ಕೊನೆಯಲ್ಲಿ ಮಧ್ಯಂತರ ವರ್ತುಲ ರಸ್ತೆ ಫ್ಲೈಓವರ್ ಜಂಕ್ಷನ್ (ದೊಮ್ಮಲೂರು ಜಂ‍ಕ್ಷನ್), ಮತ್ತೊಂದು ಕೊನೆಯಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆ ಇದೆ. ಕಳೆದ ಕೆಲವು ವರ್ಷಗಳಿಂದ 100 ಅಡಿ ರಸ್ತೆ ಬೆಂಗಳೂರು ವಾಣಿಜ್ಯಿಕವಾಗಿ ಪ್ರಮುಖ ಉನ್ನತ ರಸ್ತೆಗಳ ಆಗಿ ಮಾರ್ಪಟ್ಟಿದೆ.

ರಸ್ತೆಯ ಕೆಟ್ಟ ಪರಿಸ್ಥಿತಿ ಬಗ್ಗೆ ಸಾರ್ವಜನಿಕರು ಕೂ ಮಾಡಿದ್ದೂ, ದಿನ ಬೆಳಿಗ್ಗೆ ಈ ರಸ್ತೆಯಲ್ಲಿ ಕಚೇರಿಗೆ ಹೋಗುವುದೆಂದರೆ ಯಮ ಯಾತನೆ ಎಂದು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. 


‘ಐಟಿ ಕಂಪೆನಿಗಳೇ ಸಾಲು ಸಾಲು ಚಕ್ಕಳ ಮಕ್ಕಳ ಹಾಕಿ ಕೂತಂತಿರುವ ಇಂದಿರಾನಗರದ ರೋಡು ಮೈಕೈ ತೂತು ಮಾಡಿಕೊಂಡು ಸೊರಗಿ ಸತ್ತು ಹೋಗಿದೆ.. ಅದರ ಅವಸ್ಥೆ ನೋಡಿದರೆ ಆ ರೋಡಿಗೆ ಜನ್ಮವಿತ್ತವರ ಮುಖ ನೋಡ್ಬೇಕಲ್ಲ ಅನ್ಸತ್ತೆ, ಅದನ್ನ ಏನಾದ್ರು ಮಾಡ್ರಿ ರೀ ಶ್ರೀಮಾನ್ ಬೆಂಗಳೂರನವ್ರೆ! ಪಾಪ ಕೆಂಪೇಗೌಡ್ರು!’ ಎಂದು ಸುನಿಲ್ ಎನ್ನುವವರು ಕೂ ಮಾಡಿದ್ದಾರೆ. 

* ‘ಕಷ್ಟಕಷ್ಟ. .ಬೆಂಗಳೂರಿನ ಇಂದಿರಾನಗರದ ೧೦೦ ಅಡಿ ವರ್ತುಲ ರಸ್ತೆಯಲ್ಲಿ ಪ್ರಯಾಣ ದೇವರಿಗೂ ಬೇಡ.  ಬಿಬಿಎಂಪಿ ರಸ್ತೆ ರಿಪೇರಿ ಮಾಡೋದಾದ್ರೂ ಯಾವಾಗ?’ ಎಂದು ಆಕ್ರೋಶ ವ್ಯಕ್ತಪಡಿಸ್ದದರೆ ಗಣೇಶ್ 

* ‘ಇಂದಿರಾ ನಗರದ 100 ಅಡಿ ವರ್ತುಲ ರಸ್ತೆಯಲ್ಲಿ ಸಾಗುವುದು ಜೀವ ಪಣಕ್ಕಿಟ್ಟು ನಡೆಸುವ ಯಾವುದೇ ಸಾಹಸಮಯ ಪ್ರದರ್ಶನ ನೀಡುವ ಸ್ಟಂಟ್ ಗಳಿಗೆ ಹೋಲಿಸಿದರೆ ಅದಕ್ಕಿಂತ ಕಡಿಮೆ ಅನುಭವನ್ನಂತೂ ನೀಡಲಾರದು. ನೀವೂ ಈ ಮಾರ್ಗದಲ್ಲಿ ಸಂಚರಿಸಿದ್ದರೆ ನಿಮ್ಮ ಅನಿಸಿಕೆ ಏನು?’ ಎಂದು ನರೇಶ್ ಕೂ ಮಾಡಿದ್ದಾರೆ.  

ಇತ್ತೀಚಿನ ಸುದ್ದಿ

ಜಾಹೀರಾತು