4:46 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಬೆಂಗಳೂರಿನ‌ ಯಾತ್ರಾರ್ಥಿ ಧರ್ಮಸ್ಥಳದಲ್ಲಿ ಹೃದಯಾಘಾತದಿಂದ ಸಾವು: 12 ಜನರ ಜತೆ ಬಂದ ಭಕ್ತ

02/03/2024, 17:11

ಸಂತೋಷ್ ಅತ್ತಿಗೆ ಚಿಕ್ಕಮಗಳೂರು

info.reporterkarnataka@gmail.com

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಶೌಚಾಲಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತನನ್ನ ಬೆಂಗಳೂರಿನ ಕಲಾಸಿಪಾಳ್ಯ ನಿವಾಸಿಯಾದ ವರ್ಷದ ಮಧುಸೂದನ್ (52) ಎಂದು ಗುರುತಿಸಲಾಗಿದೆ. ಮೃತ ಮಧುಸೂದನ್ ತನ್ನ 12 ಜನ ಸ್ನೇಹಿತರೊಂದಿಗೆ ಟಿಟಿ ವಾಹನ ಮಾಡಿಕೊಂಡು ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದರು. ಟಿಟಿ ವಾಹನ ಕೊಟ್ಟಿಗೆಹಾರಕ್ಕೆ ಬರುತ್ತಿದ್ದಂತೆ ವಾಹನವನ್ನ ಶೌಚಾಲಯಕ್ಕೆ ನಿಲ್ಲಿಸಿದ್ದರು. ಈ ವೇಳೆ ಶೌಚಾಲಯಕ್ಕೆ ಹೋಗಿದ್ದ ಮಧುಸೂದನ್ ಗೆ ಶೌಚಾಲಯದಲ್ಲಿ ಹೃದಯಾಘಾತದಿಂದ ಬಳಲಿ ಬಿದ್ದಿದ್ದರು. ಜೊತೆಗಿದ್ದ ಸ್ನೇಹಿತರು ಹಾಗೂ ಸ್ಥಳೀಯರು ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರು. ಕೊಟ್ಟಿಗೆಹಾರದ ಸಮಾಜ ಸೇವಕ ಆರಿಫ್ ಕೂಡಲೇ ಆಂಬುಲೆನ್ಸ್ ತಂದು ಬಣಕಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲು ಕರೆದೊಯ್ದರು. ಆದರೆ, ತೀವ್ರ ಹೃದಯಾಘಾತಕ್ಕೊಳಗಾಗಿದ್ದ ಮಧುಸೂದನ್ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು