12:53 PM Tuesday11 - August 2026
ಬ್ರೇಕಿಂಗ್ ನ್ಯೂಸ್
ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ…

ಇತ್ತೀಚಿನ ಸುದ್ದಿ

ಬೆಂಗಳೂರಿನ ಯಾತ್ರಾರ್ಥಿಗಳಿದ್ದ ಬಸ್ ಮೂಡಿಗೆರೆ ಬಳಿ ಅಪಘಾತ: ಮಹಿಳೆ ಸಾವು; 5 ಮಂದಿ ಗಂಭೀರ

04/11/2023, 11:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಚೀಕನಹಳ್ಳಿ ಕ್ರಾಸ್ ಬಳಿ
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪ್ರಪಾತಕ್ಕೆ ಉರುಳಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ.ಮೃತ ಮಹಿಳೆಯನ್ನು ಯಲಹಂಕ ನಿವಾಸಿ ಸುರೇಖಾ (45) ಎಂದು ಗುರುತಿಸಲಾಗಿದೆ.


ಬೆಂಗಳೂರಿಂದ ಹೊರನಾಡಿಗೆ ಹೊರಟಿದ್ದ ಪ್ರವಾಸಿಗರ ಬಸ್ ಅಪಘಾತಕ್ಕೀಡಾಗಿತ್ತು. ಬಸ್ಸಿನಲ್ಲಿ 48ಕ್ಕೂ ಹೆಚ್ಚು ಪ್ರವಾಸಿಗರಿದ್ದರು.
ಬೆಂಗಳೂರು-ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಬಸ್ ತೆರಳುತ್ತಿತ್ತು. ಬೆಳಗಿನ ಜಾವ 4:45 ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಗಾಯಾಳುಗಳಿಗೆ ಮೂಡಿಗೆರೆ, ಬೇಲೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಸ್ತೆ ಬದಿ
ತಡೆಗೋಡೆ ನಿರ್ಮಿಸುವಂತೆ ಹತ್ತಾರು ಬಾರಿ ಸ್ಥಳಿಯರು
ಮನವಿ ಮಾಡಿದ್ದರೂ ತಡೆಗೋಡೆ ನಿರ್ಮಾಣ ನಡೆದಿಲ್ಲ. ಇದೇ ಜಾಗದಲ್ಲಿ 70ಕ್ಕೂ ಹೆಚ್ಚು ಅಪಘಾತಗಳಾಗಿವೆ. ಆದರೆ ಸ್ಥಳೀಯ ಜನಪ್ರತಿನಿಧಿ ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಾರೆ.
ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು