7:53 AM Saturday20 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಬರೆಯ ಬೇಕಿದ್ದ ನ್ಯಾಯಾಂಗ ಸೇವೆ ಪರೀಕ್ಷೆಯನ್ನು ಮಂಗಳೂರಿನಲ್ಲೇ ಬರೆದ ನ್ಯಾಯವಾದಿ!: ಹೈಕೋರ್ಟು ವಿಶೇಷ ಅನುಮತಿ ನೀಡಲು ಕಾರಣ ಏನು ಗೊತ್ತೇ?

20/11/2023, 10:52

ಮಂಗಳೂರು(reporterkarnataka.com): ಮಂಗಳೂರಿನ ತುಂಬು ಗರ್ಭಿಣಿ ನ್ಯಾಯವಾದಿಯೊಬ್ಬರು ಬೆಂಗಳೂರಿನಲ್ಲಿ ಬರೆಯಬೇಕಿದ್ದ ನ್ಯಾಯಾಂಗ ಸೇವೆಗೆ ಸಂಬಂಧಿಸಿದ ಪರೀಕ್ಷೆಯನ್ನು ಮಂಗಳೂರಿನಲ್ಲೇ ಬರೆದ ಅತೀ ವಿರಳ ಘಟನೆಯೊಖದಕ್ಕೆ ಕಡಲನಗರಿ ಸಾಕ್ಷಿಯಾಯಿತು.
ನ್ಯಾಯಾಂಗ ಸೇವೆಯ ಪರೀಕ್ಷೆಯನ್ನು ಮಂಗಳೂರಿನ ನ್ಯಾಯವಾದಿ ನೇತ್ರಾವತಿ ಅವರು ಬರೆಯಬೇಕಿತ್ತು. ಆದರೆ ಪರೀಕ್ಷೆಯ ಕೇಂದ್ರ ಬೆಂಗಳೂರಿನಲ್ಲಿ ಇತ್ತು. ನೇತ್ರಾವತಿ ಅವರು
ಎಂಟುವರೆ ತಿಂಗಳ ತುಂಬು ಗರ್ಭಿಣಿಯಾಗಿರುವುದರಿಂದಬೆಂಗಳೂರಿಗೆ ತೆರಳಿ ಪರೀಕ್ಷೆ ಬರೆಯಲು ಸಾಧ್ಯವಿರಲಿಲ್ಲ. ಆದುದರಿಖದ ಅವರು ಮಂಗಳೂರಿನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು ರಾಜ್ಯ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಸಿವಿಲ್ ನ್ಯಾಯಾಧೀಶರ ನೇಮಕಾತಿ ಸಂಬಂಧಿಸಿದ ಹೈಕೋರ್ಟ್‌ನ ಸಮಿತಿಯು ಈ ಅರ್ಜಿಯನ್ನು ಪುರಸ್ಕರಿಸಿ ಅಭ್ಯರ್ಥಿಯ ಮನವಿಯಂತೆ ಮಂಗಳೂರಿನಲ್ಲೇ ಪರೀಕ್ಷೆ ಬರೆಯಲು ಅನುಮತಿ ನೀಡಿತ್ತು.
ರಾಜ್ಯ ಹೈಕೋರ್ಟ್‌ನ ವಿಶೇಷ ಅನುಮತಿ ಹಿನ್ನೆಲೆಯಲ್ಲಿ ನೇತ್ರಾವತಿ ನ್ಯಾಯಾಂಗ ಸೇವೆಯ ಮುಖ್ಯ ಪರೀಕ್ಷೆಯನ್ನು ಮಂಗಳೂರಿನ ನ್ಯಾಯಾಲಯದ ಸಂಕೀರ್ಣದ ಕಟ್ಟಡದಲ್ಲಿ ಶನಿವಾರ ಮತ್ತು ಭಾನುವಾರ ಪರೀಕ್ಷೆ ಬರೆದಿದ್ದಾರೆ. ನೇತ್ರಾವತಿ ಅವರು ತುಂಬು ಗರ್ಭಿಣಿಯಾಗಿರುವುದರಿಂದ ನ್ಯಾಯಾಲಯದ ಆವರಣದಲ್ಲಿ ಆ್ಯಂಬುಲೆನ್ಸ್ ವಾಹನವನ್ನು ಸಜ್ಜುಗೊಳಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು