12:49 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಬೆಂಗಳೂರಿನಲ್ಲಿ ಬರೆಯ ಬೇಕಿದ್ದ ನ್ಯಾಯಾಂಗ ಸೇವೆ ಪರೀಕ್ಷೆಯನ್ನು ಮಂಗಳೂರಿನಲ್ಲೇ ಬರೆದ ನ್ಯಾಯವಾದಿ!: ಹೈಕೋರ್ಟು ವಿಶೇಷ ಅನುಮತಿ ನೀಡಲು ಕಾರಣ ಏನು ಗೊತ್ತೇ?

20/11/2023, 10:52

ಮಂಗಳೂರು(reporterkarnataka.com): ಮಂಗಳೂರಿನ ತುಂಬು ಗರ್ಭಿಣಿ ನ್ಯಾಯವಾದಿಯೊಬ್ಬರು ಬೆಂಗಳೂರಿನಲ್ಲಿ ಬರೆಯಬೇಕಿದ್ದ ನ್ಯಾಯಾಂಗ ಸೇವೆಗೆ ಸಂಬಂಧಿಸಿದ ಪರೀಕ್ಷೆಯನ್ನು ಮಂಗಳೂರಿನಲ್ಲೇ ಬರೆದ ಅತೀ ವಿರಳ ಘಟನೆಯೊಖದಕ್ಕೆ ಕಡಲನಗರಿ ಸಾಕ್ಷಿಯಾಯಿತು.
ನ್ಯಾಯಾಂಗ ಸೇವೆಯ ಪರೀಕ್ಷೆಯನ್ನು ಮಂಗಳೂರಿನ ನ್ಯಾಯವಾದಿ ನೇತ್ರಾವತಿ ಅವರು ಬರೆಯಬೇಕಿತ್ತು. ಆದರೆ ಪರೀಕ್ಷೆಯ ಕೇಂದ್ರ ಬೆಂಗಳೂರಿನಲ್ಲಿ ಇತ್ತು. ನೇತ್ರಾವತಿ ಅವರು
ಎಂಟುವರೆ ತಿಂಗಳ ತುಂಬು ಗರ್ಭಿಣಿಯಾಗಿರುವುದರಿಂದಬೆಂಗಳೂರಿಗೆ ತೆರಳಿ ಪರೀಕ್ಷೆ ಬರೆಯಲು ಸಾಧ್ಯವಿರಲಿಲ್ಲ. ಆದುದರಿಖದ ಅವರು ಮಂಗಳೂರಿನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು ರಾಜ್ಯ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಸಿವಿಲ್ ನ್ಯಾಯಾಧೀಶರ ನೇಮಕಾತಿ ಸಂಬಂಧಿಸಿದ ಹೈಕೋರ್ಟ್‌ನ ಸಮಿತಿಯು ಈ ಅರ್ಜಿಯನ್ನು ಪುರಸ್ಕರಿಸಿ ಅಭ್ಯರ್ಥಿಯ ಮನವಿಯಂತೆ ಮಂಗಳೂರಿನಲ್ಲೇ ಪರೀಕ್ಷೆ ಬರೆಯಲು ಅನುಮತಿ ನೀಡಿತ್ತು.
ರಾಜ್ಯ ಹೈಕೋರ್ಟ್‌ನ ವಿಶೇಷ ಅನುಮತಿ ಹಿನ್ನೆಲೆಯಲ್ಲಿ ನೇತ್ರಾವತಿ ನ್ಯಾಯಾಂಗ ಸೇವೆಯ ಮುಖ್ಯ ಪರೀಕ್ಷೆಯನ್ನು ಮಂಗಳೂರಿನ ನ್ಯಾಯಾಲಯದ ಸಂಕೀರ್ಣದ ಕಟ್ಟಡದಲ್ಲಿ ಶನಿವಾರ ಮತ್ತು ಭಾನುವಾರ ಪರೀಕ್ಷೆ ಬರೆದಿದ್ದಾರೆ. ನೇತ್ರಾವತಿ ಅವರು ತುಂಬು ಗರ್ಭಿಣಿಯಾಗಿರುವುದರಿಂದ ನ್ಯಾಯಾಲಯದ ಆವರಣದಲ್ಲಿ ಆ್ಯಂಬುಲೆನ್ಸ್ ವಾಹನವನ್ನು ಸಜ್ಜುಗೊಳಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು